ತಮಿಳು ನೆಲ, ಭಾಷೆ ಸಂಸ್ಕೃತಿಯಲ್ಲೂ ರಾಮಾಯಣದ ಸಂದೇಶ ಹಾಗೂ ಮೌಲ್ಯಗಳು ಸಮೃದ್ಧವಾಗಿವೆ. ಭರತನಾಟ್ಯದಂಥ ಶಿಷ್ಟ ಕಲೆ ಹಾಗೂ ಇಲ್ಲಿನ ಜನಪದೀಯ ಸಂಸ್ಕೃತಿಯಲ್ಲೂ ರಾಮಾಯಣದ ಹೆಗ್ಗುರುತುಗಳು ಕಾಣಿಸುತ್ತಿವೆ. ಧನುಷ್ಕೋಟಿ, ರಾಮಸೇತು, ರಾಮೇಶ್ವರದಂಥಹ ಪವಿತ್ರ ಸ್ಥಳಗಳು ತಮಿಳುನಾಡಿನಲ್ಲಿರುವುದು ರಾಮಾಯಣದೊಂದಿಗಿನ ನಂಟಿಗೆ ಸಾಕ್ಷಿ ಎಂದು ಪೇಜಾವರ ಶ್ರೀಗಳು ಹೇಳಿದರು.