ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತಂಜಲಿ ಯೋಗಪೀಠಕ್ಕೆ ಪೇಜಾವರ ಶ್ರೀ ಭೇಟಿ

Last Updated 9 ನವೆಂಬರ್ 2020, 15:23 IST
ಅಕ್ಷರ ಗಾತ್ರ

ಉಡುಪಿ: ಹರಿದ್ವಾರದಲ್ಲಿರುವ ಪ್ರಸಿದ್ಧ ಪತಂಜಲಿ ಯೋಗಪೀಠಕ್ಕೆ ಸೋಮವಾರ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ ನೀಡಿದರು.

ಈ ಸಂದರ್ಭ ಯೋಗಗುರು ಬಾಬಾ ರಾಮ್‌ದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಅವರು ಪೇಜಾವರ ಶ್ರೀಗಳನ್ನು ಬರಮಾಡಿಕೊಂಡು ಗೌರವಿಸಿದರು.

ಪತಂಜಲಿ ಆಯುರ್ವೇದ ಆಸ್ಪತ್ರೆ, ಆಯುರ್ವೇದ ವನ, ಪತಂಜಲಿ ಉತ್ಪನ್ನಗಳ ಮಳಿಗೆ ಸೇರಿದಂತೆ ಯೋಗ ಪೀಠದ ಹಲವು ವಿಭಾಗಗಳಿಗೆ ಭೇಟಿನೀಡಿದ ಶ್ರೀಗಳು ಮಾಹಿತಿ ಪಡೆದುಕೊಂಡರು.

ಕನ್ಯಾಡಿ ರಾಮಕ್ಷೇತ್ರದ ಹರಿದ್ವಾರದ ಶಾಖೆಗೂ ತೆರಳಿ ಆಶ್ರಮದಲ್ಲಿ ಕೆಲಹೊತ್ತು ಕಾಲ ಕಳೆದರು. ಕ್ಷೇತ್ರದ ವ್ಯವಸ್ಥಾಪಕ ನರೇಂದ್ರ ಜೀ ಅವರೊಂದಿಗೆ ಮಾತುಕತೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT