ಉಡುಪಿ: ಸುಬ್ರಹ್ಮಣ್ಯ ಮಠ ಹಾಗೂ ದೇವಸ್ಥಾನ ನಡುವಿನ ಶಾಂತಿ ಸಂಧಾನ ಮಾತುಕತೆ ಪ್ರಗತಿಯಲ್ಲಿದ್ದು, ಎರಡೂ ಕಡೆಯವರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ಇಬ್ಬರಿಗೂ ಒಪ್ಪಿತವಾಗುವಂತಹ ಸಂಧಾನ ಸೂತ್ರವನ್ನು ಸಿದ್ಧಪಡಿಸಲಾಗಿದೆ ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ತಿಳಿಸಿದ್ದಾರೆ.
ಇನ್ನೊಂದು ಸುತ್ತಿನ ಮಾತುಕತೆಯಲ್ಲಿ ಸಂಧಾನ ಕಾರ್ಯವು ಪೂರ್ಣಗೊಳ್ಳಲಿದ್ದು, ಜೂನ್ 10ರಂದು ನಡೆಯಬೇಕಿದ್ದ ಮಾತುಕತೆ ದೇವಸ್ಥಾನ ಕಮಿಟಿಯ ಅಧ್ಯಕ್ಷರ ವೈಯಕ್ತಿಕ ಅನಾನುಕೂಲಗಳಿಂದ ಮೂಂದೂಡಲಾಗಿದೆ.
ಜೂನ್ 23ರಂದು ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ ಎಂದು ಪೇಜಾವರ ಶ್ರೀಗಳು ತಿಳಿಸಿದ್ದಾರೆ.