ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ‘ಸಮಾಜದಲ್ಲಿ ವಿದ್ವಂಸಕ ಕೃತ್ಯ ನಡೆಸುವ ದುಷ್ಟ ಶಕ್ತಿಗಳು ಮರು ಹುಟ್ಟು ಪಡೆಯದಂತೆ ಸರ್ಕಾರ ಜಾಗ್ರತೆ ವಹಿಸಬೇಕು. ಸಾಮಾಜಿಕ ಸಂಘಟನೆಗಳು, ರಾಜಕೀಯ ಪಕ್ಷಗಳು ದೇಶವಿರೋಧಿ ಸಂಘಟನೆಗಳ ಪರವಾಗಿ ನಿಲ್ಲಬಾರದು. ಸಮಾಜದಲ್ಲಿ ಶಾಂತಿ ನೆಮ್ಮದಿ ನೆಲೆಸಬೇಕು’ ಎಂದು ಸ್ವಾಮೀಜಿ ಅಭಿಪ್ರಾಯಪಟ್ಟರು.