ಈ ಸಂದರ್ಭ ಮಾತನಾಡಿದ ಶ್ರೀಗಳು, ‘ರಾಮಮಂದಿರ ನಿರ್ಮಾಣಕ್ಕೆ ಸಮಸ್ತ ಹಿಂದೂ ಸಮಾಜ ಸಹಕಾರ ಹಾಗೂ ಸಹಭಾಗಿತ್ವ ನೀಡಬೇಕು ಎಂಬ ಅಪೇಕ್ಷೆಯಿಂದ ನಾಡಿನಾದ್ಯಂತ ಸಂಚರಿಸುತ್ತಿದ್ದು, ಸಮಾಜದ ಎಲ್ಲ ವರ್ಗದವರನ್ನು ಭೇಟಿ ಮಾಡಲಾಗುತ್ತಿದೆ. ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನಡೆಯಲು ಪ್ರತಿ ಮನೆಯಲ್ಲಿ ರಾಮದೀಪಗಳು ಪ್ರಜ್ವಲಿಸಬೇಕು. ರಾಮಮಂತ್ರ ಜಪಿಸಬೇಕು’ ಎಂದು ಶ್ರೀಗಳು ಸಲಹೆ ನೀಡಿದರು.