ಎರಡನೇ ಬಾರಿಗೆ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿದ್ದು, ಅಲ್ಲಿನ ಜನರು ಸಂಭ್ರಮಿಸಿದ್ದು ಕಂಡುಬಂತು. ರಸ್ತೆಯ ಇಕ್ಕೆಲ, ವಿಮಾನ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ನೂರಾರು ನೃತ್ಯ ತಂಡಗಳ ಪ್ರದರ್ಶನ ಇತ್ತು. ರಾಜ್ಯದಿಂದ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಇಸ್ಕಾನ್ನ ಮಧುಪಂಡಿತ ದಾಸ್ ಕೂಡಾ ಇದ್ದರು ಎಂದು ಮಠದ ಆಪ್ತರು ತಿಳಿಸಿದ್ದಾರೆ.