ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಡ್ವಾಣಿ ಭೇಟಿ ಮಾಡಿದ ಪೇಜಾವರ ಸ್ವಾಮೀಜಿ

Last Updated 12 ಅಕ್ಟೋಬರ್ 2022, 13:49 IST
ಅಕ್ಷರ ಗಾತ್ರ

ಉಡುಪಿ: ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಬುಧವಾರ ದೆಹಲಿಯಲ್ಲಿ ಬಿಜೆಪಿ ಹಿರಿಯ ಧುರೀಣ ಎಲ್.ಕೆ. ಅಡ್ವಾಣಿ ಅವರನ್ನು ಭೇಟಿಮಾಡಿ ಯೋಗಕ್ಷೇಮ ವಿಚಾರಿಸಿದರು.

ಅಯೋಧ್ಯೆ ರಾಮಜನ್ಮಭೂಮಿ ಆಂದೋಲನದಲ್ಲಿ ಅಡ್ವಾಣಿ ಅವರ ಪಾತ್ರದ ಬಗ್ಗೆ ಚರ್ಚಿಸಿದ ಶ್ರೀಗಳು ಅಂದಿನ ಹೋರಾಟದ ಫಲವಾಗಿ ಭವ್ಯವಾದ ರಾಮಮಂದಿರ ನಿರ್ಮಾಣಗೊಳ್ಳುವಂತಾಗಿದೆ ಎಂದು ಅಡ್ವಾಣಿ ಅವರನ್ನು ಶ್ಲಾಘಿಸಿದರು.

ಈ ಸಂದರ್ಭ ಹಿರಿಯ ಯತಿಗಳಾದ ವಿಶ್ವೇಶತೀರ್ಥ ಶ್ರೀಗಳು ನೀಡಿದ ಸ್ಫೂರ್ತಿಯನ್ನು ಅಡ್ವಾಣಿ ಮನಸಾರೆ ಸ್ಮರಿಸಿದರು. ಕೃಷ್ಣನ ಗಂಧ ಪ್ರಸಾದ ಹಾಗೂ ಶಾಲು ಸ್ಮರಣಿಕೆ, ಫಲ ಮಂತ್ರಾಕ್ಷತೆಯನ್ನು ಸ್ವಾಮೀಜಿ ಅಡ್ವಾಣಿ ಅವರಿಗೆ ನೀಡಿದರು. ಈ ಸಂದರ್ಭ ಪುತ್ರಿ ಪ್ರತಿಭಾ ಅಡ್ವಾಣಿ ಹಾಗೂ ಕುಟುಂಬದ ಸದಸ್ಯರು ಇದ್ದರು.

ವಿದ್ವಾನ್ ದೇವಿಪ್ರಸಾದ್ ಭಟ್ವ, ವಿಷ್ಣುಮೂರ್ತಿ ಆಚಾರ್ಯ, ಕೃಷ್ಣ ಭಟ್ ಉಪಸ್ಥಿತರಿದ್ದರು .

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT