ಗುರುವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಯಾವ ಉದ್ದೇಶವಿಟ್ಟುಕೊಂಡು ‘ಅರಳು ಮರಳು’ ಹೇಳಿಕೆ ನೀಡಿದರೋ ತಿಳಿಯದು. ಎದುರಿಗೆ ಸಿಕ್ಕಾಗ ಗೌರವಯುತವಾಗಿ ಮಾತನಾಡುತ್ತಾರೆ. ಆದರೆ, ಹಿಂದಿನಿಂದ ಮಾತ್ರ ಟೀಕೆ ಮಾಡುತ್ತಲೇ ಇರುತ್ತಾರೆ. ಇಂತಹ ನಡವಳಿಕೆ ಸರಿಯಲ್ಲ ಎಂದು ತಿರುಗೇಟು ನೀಡಿದರು.