ಸರಳತೆಗೆ ಪರ್ಯಾಯ ಎಂಬಂತಿದ್ದ ಸಿದ್ದೇಶ್ವರ ಸ್ವಾಮೀಜಿ ಆಡಂಬರದ ಸ್ಪರ್ಶವಿಲ್ಲದೆ ವಿರಕ್ತ ಜೀವನ ನಡೆಸುವವರಿಗೆ ಮಾದರಿಯಾಗಿದ್ದರು. ಸೇವಾ ಕಾರ್ಯ ಹಾಗೂ ಮಾರ್ಗದರ್ಶನದ ಮೂಲಕ ಅಸಂಖ್ಯ ಜನರ ದುಃಖ ದುಮ್ಮಾನಗಳಿಗೆ ಸಾಂತ್ವನ ಸಮಾಧಾನ ನೀಡುತ್ತ ದಾರಿ ಬೆಳಕಾಗಿದ್ದರು. ಋಷಿ ಪರಂಪರೆಯ ಅಮೂಲ್ಯ ಕೊಂಡಿ ಕಳಚಿರುವುದಕ್ಕೆ ತೀವ್ರ ವಿಷಾದವಾಗಿದೆ. ಸಿದ್ಧೇಶ್ವರ ಸ್ವಾಮೀಜಿ ಅವರ ಆತ್ಮಕ್ಕೆ ಶ್ರೀಕೃಷ್ಣನು ಸದ್ಗತಿ ಕರುಣಿಸಲಿ