ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗೆ ‘ಎಕ್ಸ್’ ಶ್ರೇಣಿ ಭದ್ರತೆ

Last Updated 1 ಜನವರಿ 2021, 12:38 IST
ಅಕ್ಷರ ಗಾತ್ರ

ಉಡುಪಿ: ಅಯೋಧ್ಯೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ವಿಶ್ವಸ್ಥರಾಗಿರುವ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗೆ ರಾಜ್ಯ ಸರ್ಕಾರ ‘ಎಕ್ಸ್’ ಶ್ರೇಣಿ ಭದ್ರತೆ ಒದಗಿಸಿದೆ ಎಂದು ಮಠದ ಸಿಬ್ಬಂದಿ ತಿಳಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವ ಕುರಿತು ಜನಜಾಗೃತಿ ಅಭಿಯಾನದಲ್ಲಿ ನಿರತರಾಗಿರುವ ಪೇಜಾವರ ಶ್ರೀಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

ಮನವಿಗೆ ಸ್ಪಂದಿಸಿದ ಸರ್ಕಾರ ‘ಎಕ್ಸ್’ ಶ್ರೇಣಿ ಭದ್ರತೆ ಒದಗಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಶಾಸಕ ಭಟ್ ಅವರಿಗೆ ಕೃತಜ್ಞತೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT