ಮಕ್ಕಳು ಮುಂದಿನ ಭವಿಷ್ಯವಾಗಿರುವ ಕಾರಣ ಪೊಲೀಸ್ ಅಧಿಕಾರಿಗಳು ಒತ್ತಡದ ಕಾರ್ಯದ ನಡೆವೆಯೂ ನೊಂದ ಮಕ್ಕಳಿಗೆ ನ್ಯಾಯ ಕೊಡಿಸುವ ಕೆಲಸ ಮಾಡಬೇಕು. ಸಂತ್ರಸ್ತ ಮಕ್ಕಳಿಗೆ ಪುನರ್ವಸತಿ, ಆರೋಗ್ಯ, ಶಿಕ್ಷಣ ಅಗತ್ಯವಿದ್ದು, ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ ಪತ್ತೆಯಾದರೆ ಮಕ್ಕಳ ಕಲ್ಯಾಣ ಸಮಿತಿಗೆ ವರದಿ ನೀಡಬೇಕು ಎಂದರು.