<p>ಉಡುಪಿ: ಪುತ್ರಿಯರಿಬ್ಬರ ಮೇಲೆ ಲೈಂಗಿಕ ಹಲ್ಲೆ ನಡೆಸಿದ ಅಪರಾಧಿಗೆ ಉಡುಪಿ ಹೆಚ್ಚುವರಿ ಜಿಲ್ಲಾಅ ಹಾಗೂ ಸೆಷನ್ಸ್ ನ್ಯಾಯಾಲಯ (ಪೋಕ್ಸೋ ತ್ವರಿತ ನ್ಯಾಯಾಲಯ) ಸೋಮವಾರ ಜೀವನ ಪರ್ಯಂತ ಕಠಿಣ ಜೈಲು ಶಿಕ್ಷೆ ವಿಧಿಸಿದೆ.</p>.<p>14 ಹಾಗೂ 16 ವರ್ಷದ ಪುತ್ರಿಯರಿಗೆ ಅಪ್ಪನೇ ಲೈಂಕಿಗ ಹಲ್ಲೆ ನಡೆಸಿದ್ದ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ಯ ಆರೋಪಿ ವಿರುದ್ಧ 2019ರಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.</p>.<p>ಅಂದಿನ ಸರ್ಕಲ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಪ್ರಕರಣದ ತನಿಖೆ ನಡೆಸಿದ್ದರು. ಬಳಿಕ ಸರ್ಕಲ್ ಇನ್ಸ್ಪೆಕ್ಟರ್ ಸಂಪತ್ ಕುಮಾರ್ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. 26 ಮಂದಿಯ ಸಾಕ್ಷಿಗಳ ಪೈಕಿ 8 ಮಂದಿಯ ವಿಚಾರಣೆ ನಡೆದು ಆರೋಪಿಯ ಕೃತ್ಯ ಸಾಬೀತಾಗಿತ್ತು. ಸೋಮವಾರ ನ್ಯಾಯಾಧೀಶರಾದ ಯಾದವ್ ವನಮಾಲಾ ಆನಂದರಾವ್ ಅವರು ಅಪರಾಧಿಗೆ ಜೀವನ ಪರ್ಯಂತ ಜೈಲು ಶಿಕ್ಷೆ ಆದೇಶ ಪ್ರಕಟಿಸಿದ್ದು, ₹ 15,000 ವಿಧಿಸಿದ್ದಾರೆ. ಪ್ರಕರಣದಲ್ಲಿ ಮೊದಲನೆಯ ನೊಂದ ಬಾಲಕಿಗೆ ₹ 5 ಲಕ್ಷ ಪರಿಹಾರ ಹಾಗೂ 2ನೇ ನೊಂದ ಬಾಲಕಿಗೆ ₹ 1.5 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.</p>.<p>ವಿಶೇಷ ಸರ್ಕಾರಿ ಅಭಿಯೋಜಕರಾದ ವೈ.ಟಿ ರಾಘವೇಂದ್ರ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಪುತ್ರಿಯರಿಬ್ಬರ ಮೇಲೆ ಲೈಂಗಿಕ ಹಲ್ಲೆ ನಡೆಸಿದ ಅಪರಾಧಿಗೆ ಉಡುಪಿ ಹೆಚ್ಚುವರಿ ಜಿಲ್ಲಾಅ ಹಾಗೂ ಸೆಷನ್ಸ್ ನ್ಯಾಯಾಲಯ (ಪೋಕ್ಸೋ ತ್ವರಿತ ನ್ಯಾಯಾಲಯ) ಸೋಮವಾರ ಜೀವನ ಪರ್ಯಂತ ಕಠಿಣ ಜೈಲು ಶಿಕ್ಷೆ ವಿಧಿಸಿದೆ.</p>.<p>14 ಹಾಗೂ 16 ವರ್ಷದ ಪುತ್ರಿಯರಿಗೆ ಅಪ್ಪನೇ ಲೈಂಕಿಗ ಹಲ್ಲೆ ನಡೆಸಿದ್ದ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ಯ ಆರೋಪಿ ವಿರುದ್ಧ 2019ರಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.</p>.<p>ಅಂದಿನ ಸರ್ಕಲ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಪ್ರಕರಣದ ತನಿಖೆ ನಡೆಸಿದ್ದರು. ಬಳಿಕ ಸರ್ಕಲ್ ಇನ್ಸ್ಪೆಕ್ಟರ್ ಸಂಪತ್ ಕುಮಾರ್ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. 26 ಮಂದಿಯ ಸಾಕ್ಷಿಗಳ ಪೈಕಿ 8 ಮಂದಿಯ ವಿಚಾರಣೆ ನಡೆದು ಆರೋಪಿಯ ಕೃತ್ಯ ಸಾಬೀತಾಗಿತ್ತು. ಸೋಮವಾರ ನ್ಯಾಯಾಧೀಶರಾದ ಯಾದವ್ ವನಮಾಲಾ ಆನಂದರಾವ್ ಅವರು ಅಪರಾಧಿಗೆ ಜೀವನ ಪರ್ಯಂತ ಜೈಲು ಶಿಕ್ಷೆ ಆದೇಶ ಪ್ರಕಟಿಸಿದ್ದು, ₹ 15,000 ವಿಧಿಸಿದ್ದಾರೆ. ಪ್ರಕರಣದಲ್ಲಿ ಮೊದಲನೆಯ ನೊಂದ ಬಾಲಕಿಗೆ ₹ 5 ಲಕ್ಷ ಪರಿಹಾರ ಹಾಗೂ 2ನೇ ನೊಂದ ಬಾಲಕಿಗೆ ₹ 1.5 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.</p>.<p>ವಿಶೇಷ ಸರ್ಕಾರಿ ಅಭಿಯೋಜಕರಾದ ವೈ.ಟಿ ರಾಘವೇಂದ್ರ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>