ಅಂದಿನ ಸರ್ಕಲ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಪ್ರಕರಣದ ತನಿಖೆ ನಡೆಸಿದ್ದರು. ಬಳಿಕ ಸರ್ಕಲ್ ಇನ್ಸ್ಪೆಕ್ಟರ್ ಸಂಪತ್ ಕುಮಾರ್ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. 26 ಮಂದಿಯ ಸಾಕ್ಷಿಗಳ ಪೈಕಿ 8 ಮಂದಿಯ ವಿಚಾರಣೆ ನಡೆದು ಆರೋಪಿಯ ಕೃತ್ಯ ಸಾಬೀತಾಗಿತ್ತು. ಸೋಮವಾರ ನ್ಯಾಯಾಧೀಶರಾದ ಯಾದವ್ ವನಮಾಲಾ ಆನಂದರಾವ್ ಅವರು ಅಪರಾಧಿಗೆ ಜೀವನ ಪರ್ಯಂತ ಜೈಲು ಶಿಕ್ಷೆ ಆದೇಶ ಪ್ರಕಟಿಸಿದ್ದು, ₹ 15,000 ವಿಧಿಸಿದ್ದಾರೆ. ಪ್ರಕರಣದಲ್ಲಿ ಮೊದಲನೆಯ ನೊಂದ ಬಾಲಕಿಗೆ ₹ 5 ಲಕ್ಷ ಪರಿಹಾರ ಹಾಗೂ 2ನೇ ನೊಂದ ಬಾಲಕಿಗೆ ₹ 1.5 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.