<p>ಉಡುಪಿ: ಎಂಟನೇ ಶತಮಾನದ ಕಾಲದಲ್ಲೇ ತುಳು ಭಾಷೆಯು ಸಮೃದ್ಧವಾಗಿತ್ತು. ಲಿಪಿಯನ್ನು ಕೆಲವರಷ್ಟೇ ಬಳಸುತ್ತಿದ್ದರು ಎನ್ನುವುದು ಸರಿಯಲ್ಲ ಈ ಕುರಿತು ಇನ್ನಷ್ಟು ಅಧ್ಯಯನವಾಗಬೇಕು ಎಂದು ಸಂಶೋಧಕ, ಮಂಗಳೂರಿನ ಥಿಯಾಲಾಜಿಕಲ್ ಕಾಲೇಜಿನ ಪತ್ರಾಗಾರ ವಿಭಾಗದ ನಿವೃತ್ತ ಸಹಾಯಕ ಬೆನೆಟ್ ಜಿ.ಅಮ್ಮನ್ನ ಪ್ರತಿಪಾದಿಸಿದರು.</p>.<p>ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಸಂಯುಕ್ತ ಆಶ್ರಯದಲ್ಲಿ ಎಂಜಿಎಂ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪೊಳಲಿ ಶೀನಪ್ಪ ಹೆಗ್ಗಡೆ, ಎಸ್.ಆರ್.ಹೆಗ್ಡೆ ಪ್ರಶಸ್ತಿ ಪ್ರದಾನ, ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.</p>.<p>ವೆಂಕಟರಾಜ ಪುಣಿಂಚಿತ್ತಾಯ ಅವರು ತುಳು ಲಿಪಿ ಬೆಳಕಿಗೆ ತರುವ ಮೂಲಕ ತುಳು ಸಾಹಿತ್ಯ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ತುಳು ಲಿಪಿ ಎಷ್ಟೋ ವರ್ಷಗಳ ಹಿಂದೆಯೇ ಅಸ್ತಿತ್ವದಲ್ಲಿತ್ತು ಎಂದರು.</p>.<p>ನಾನು ಪತ್ರಾಗಾರದಲ್ಲಿ ಕೆಲಸ ಮಾಡುತ್ತಿದ್ದಾಗ ನೂರಾರು ಸಂಶೋಧಕರು, ವಿದ್ಯಾರ್ಥಿಗಳು ನನ್ನ ಬಳಿಗೆ ಬಂದು ಸಂಶೋಧನೆಗೆ ಸಂಬಂಧಪಟ್ಟ ಪ್ರಶ್ನೆಗಳನ್ನು ಕೇಳುತ್ತಿದ್ದರು. ಇದರಿಂದ ಸ್ಫೂರ್ತಿಗೊಂಡು ಸಂಶೋಧನಾ ಕ್ಷೇತ್ರಕ್ಕಿಳಿದೆ, ಕೃತಿ ರಚನೆಯಲ್ಲಿ ತೊಡಗಿಸಿಕೊಂಡೆ ಎಂದು ಹೇಳಿದರು.</p>.<p>ಥಿಯಾಲಾಜಿಕಲ್ ಕಾಲೇಜಿನ ಪತ್ರಾಗಾರದಲ್ಲಿ ಕರಾವಳಿಗೆ ಸಂಬಂಧಪಟ್ಟ ಸಾಕಷ್ಟು ಹಸ್ತಪ್ರತಿಗಳಿವೆ. ಅಲ್ಲಿನ ಗ್ರಂಥಾಲಯದಲ್ಲಿ 40 ಸಾವಿರಕ್ಕೂ ಹೆಚ್ಚು ಪುಸ್ತಕಗಳಿವೆ. ಸಂಶೋಧಕರು ಪ್ರಯೋಜನ ಪಡೆದುಕೊಳ್ಳಬೇಕು. ಹಸ್ತಪ್ರತಿ, ತಾಳೆಗರಿ, ಪ್ರಾಚೀನ ದಾಖಲೆಗಳ ಸಂರಕ್ಷಣೆ ಕಾರ್ಯ ಇನ್ನಷ್ಟು ನಡೆಯಬೇಕು ಎಂದು ಬೆನೆಟ್ ಹೇಳಿದರು.</p>.<p>ಚೇಳ್ಯಾರುಗುತ್ತು ಎಸ್.ಆರ್.ಹೆಗ್ಡೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ ಇಂದಿರಾ ಹೆಗ್ಡೆ ಮಾತನಾಡಿ, ಸೃಜನಶೀಲ ಕವಿಗಳಿಗೆ ನೀಡುವ ಪ್ರಶಸ್ತಿಯ ಮೊತ್ತ ಏರಿಕೆಯಾಗುತ್ತ ಹೋಗುತ್ತಿದೆ. ಆದರೆ ಸಂಶೋಧಕರಿಗೆ ನೀಡುವ ಪ್ರಶಸ್ತಿಯ ಮೊತ್ತ ಏರಿಕೆಯಾಗಿಲ್ಲ. ಈ ಕಾರಣಕ್ಕೆ ಆ ಕ್ಷೇತ್ರದವರಿಗೆ ಒತ್ತು ನೀಡಿ ಈ ಪ್ರಶಸ್ತಿ ನೀಡಲಾಗಿದೆ ಎಂದರು.</p>.<p>ಇಂದು ಸಂಶೋಧಕರ ಪುಸ್ತಕಗಳನ್ನು ಮಾರುಕಟ್ಟೆಗೆ ತಲುಪಿಸುವವರೇ ಇಲ್ಲ. ಸಂಶೋಧಕರಿಗೆ ಬೆಂಬಲ ಮತ್ತು ಪ್ರೋತ್ಸಾಹದ ಅಗತ್ಯವಿದೆ ಎಂದು ಹೇಳಿದರು.</p>.<p>ಅಜ್ಜರಕಾಡು ಡಾ.ಜಿ.ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಇತಿಹಾಸ ಪ್ರಾಧ್ಯಾಪಕ ರಾಮದಾಸ ಪ್ರಭು ಅವರು ‘ತುಳುನಾಡಿನ ಪ್ರಭುತ್ವ ಹಾಗೂ ಧಾರ್ಮಿಕ ಪಂಥಗಳ’ ಬಗ್ಗೆ ಉಪನ್ಯಾಸ ನೀಡಿದರು.</p>.<p>ಮಂಗಳೂರಿನ ನಿಟ್ಟೆ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಮುಖ್ಯಸ್ಥೆ ಸಾಯಿಗೀತ ಪ್ರಶಸ್ತಿ ಪುರಸ್ಕೃತರನ್ನು ಪರಿಚಯಿಸಿದರು. ಎಂಜಿಎಂ ಕಾಲೇಜು ಪ್ರಾಂಶುಪಾಲ ಲಕ್ಷ್ಮಿನಾರಾಯಣ ಕಾರಂತ, ನಿವೃತ್ತ ಪ್ರಾಂಶುಪಾಲ ಗಣನಾಥ ಎಕ್ಕಾರು ಮಾತನಾಡಿದರು.</p>.<p>ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಬಿ.ಜಗದೀಶ್ ಶೆಟ್ಟಿ ಸ್ವಾಗತಿಸಿದರು. ಪದ್ಮಾವತಿ ಭಟ್ ಪ್ರಾರ್ಥನೆ ಹಾಡಿದರು. ಸಹಾಯಕ ಪ್ರಾಧ್ಯಾಪಕ ರಾಘವೇಂದ್ರ ತುಂಗ ವಂದಿಸಿದರು.</p>.<p>Quote - ತುಳು ಭಾಷೆಗಾಗಿ ಮಿಷನರಿಗಳು ಅಪಾರ ಕೊಡುಗೆ ನೀಡಿದ್ದಾರೆ. ಬಾಸೆಲ್ ಮಿಷನ್ನ ಮುದ್ರಣಾಲಯದಲ್ಲಿ ಮೊದಲು ಮುದ್ರಣಗೊಂಡಿದ್ದೇ ಪಾಡ್ದನ ಬೆನೆಟ್ ಜಿ. ಅಮ್ಮನ್ನ ನಿವೃತ್ತ ಪ್ರಾಧ್ಯಾಪಕ</p>.<p><strong>ಸಿರಿ ಬಗ್ಗೆ ಹೊಸ ಶೋಧ’</strong></p><p> ಬೆನೆಟ್ ಜಿ. ಅಮ್ಮನ್ನ ಅವರು ಸಿರಿ ಬಗ್ಗೆ ಹೊಸ ಶೋಧ ನಡೆಸಿದ್ದಾರೆ. ಈ ಕುರಿತ ಕೃತಿ ಅವರ ಸಂಪಾದಕತ್ವದಲ್ಲಿ ಶೀಘ್ರ ಹೊರಬರಲಿದೆ. ಹೊಸ ಶೋಧದ ಪ್ರಕಾರ ಸಿರಿಯ ಪಯಣ ಗೇರುಸೊಪ್ಪೆಯಿಂದ ಆರಂಭವಾಗುತ್ತದೆ. ಇದುವರೆಗೆ ಸಂಗ್ರಹಿಸಿರುವ ಯಾವ ಪಾಡ್ದನದಲ್ಲೂ ಗೇರುಸೊಪ್ಪೆಯ ಉಲ್ಲೇಖವಿರಲಿಲ್ಲ. ಈ ಕುರಿತು ಶಿವಳ್ಳಿ ಬ್ರಾಹ್ಮಣರ ಭಾಷೆಯಲ್ಲಿ ಬರೆದ ಕೃತಿಯು ಲಭ್ಯವಾಗಿದೆ. ಗೇರುಸೊಪ್ಪೆ ಮತ್ತು ತುಳುನಾಡಿಗಿರುವ ಸಂಬಂಧದ ಬಗ್ಗೆ ಹೆಚ್ಚಿನ ಅಧ್ಯಯನ ನಡೆಯುವ ಅಗತ್ಯವಿದೆ ಎಂದು ಎಂದು ಇಂದಿರಾ ಹೆಗ್ಡೆ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಎಂಟನೇ ಶತಮಾನದ ಕಾಲದಲ್ಲೇ ತುಳು ಭಾಷೆಯು ಸಮೃದ್ಧವಾಗಿತ್ತು. ಲಿಪಿಯನ್ನು ಕೆಲವರಷ್ಟೇ ಬಳಸುತ್ತಿದ್ದರು ಎನ್ನುವುದು ಸರಿಯಲ್ಲ ಈ ಕುರಿತು ಇನ್ನಷ್ಟು ಅಧ್ಯಯನವಾಗಬೇಕು ಎಂದು ಸಂಶೋಧಕ, ಮಂಗಳೂರಿನ ಥಿಯಾಲಾಜಿಕಲ್ ಕಾಲೇಜಿನ ಪತ್ರಾಗಾರ ವಿಭಾಗದ ನಿವೃತ್ತ ಸಹಾಯಕ ಬೆನೆಟ್ ಜಿ.ಅಮ್ಮನ್ನ ಪ್ರತಿಪಾದಿಸಿದರು.</p>.<p>ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಸಂಯುಕ್ತ ಆಶ್ರಯದಲ್ಲಿ ಎಂಜಿಎಂ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪೊಳಲಿ ಶೀನಪ್ಪ ಹೆಗ್ಗಡೆ, ಎಸ್.ಆರ್.ಹೆಗ್ಡೆ ಪ್ರಶಸ್ತಿ ಪ್ರದಾನ, ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.</p>.<p>ವೆಂಕಟರಾಜ ಪುಣಿಂಚಿತ್ತಾಯ ಅವರು ತುಳು ಲಿಪಿ ಬೆಳಕಿಗೆ ತರುವ ಮೂಲಕ ತುಳು ಸಾಹಿತ್ಯ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ತುಳು ಲಿಪಿ ಎಷ್ಟೋ ವರ್ಷಗಳ ಹಿಂದೆಯೇ ಅಸ್ತಿತ್ವದಲ್ಲಿತ್ತು ಎಂದರು.</p>.<p>ನಾನು ಪತ್ರಾಗಾರದಲ್ಲಿ ಕೆಲಸ ಮಾಡುತ್ತಿದ್ದಾಗ ನೂರಾರು ಸಂಶೋಧಕರು, ವಿದ್ಯಾರ್ಥಿಗಳು ನನ್ನ ಬಳಿಗೆ ಬಂದು ಸಂಶೋಧನೆಗೆ ಸಂಬಂಧಪಟ್ಟ ಪ್ರಶ್ನೆಗಳನ್ನು ಕೇಳುತ್ತಿದ್ದರು. ಇದರಿಂದ ಸ್ಫೂರ್ತಿಗೊಂಡು ಸಂಶೋಧನಾ ಕ್ಷೇತ್ರಕ್ಕಿಳಿದೆ, ಕೃತಿ ರಚನೆಯಲ್ಲಿ ತೊಡಗಿಸಿಕೊಂಡೆ ಎಂದು ಹೇಳಿದರು.</p>.<p>ಥಿಯಾಲಾಜಿಕಲ್ ಕಾಲೇಜಿನ ಪತ್ರಾಗಾರದಲ್ಲಿ ಕರಾವಳಿಗೆ ಸಂಬಂಧಪಟ್ಟ ಸಾಕಷ್ಟು ಹಸ್ತಪ್ರತಿಗಳಿವೆ. ಅಲ್ಲಿನ ಗ್ರಂಥಾಲಯದಲ್ಲಿ 40 ಸಾವಿರಕ್ಕೂ ಹೆಚ್ಚು ಪುಸ್ತಕಗಳಿವೆ. ಸಂಶೋಧಕರು ಪ್ರಯೋಜನ ಪಡೆದುಕೊಳ್ಳಬೇಕು. ಹಸ್ತಪ್ರತಿ, ತಾಳೆಗರಿ, ಪ್ರಾಚೀನ ದಾಖಲೆಗಳ ಸಂರಕ್ಷಣೆ ಕಾರ್ಯ ಇನ್ನಷ್ಟು ನಡೆಯಬೇಕು ಎಂದು ಬೆನೆಟ್ ಹೇಳಿದರು.</p>.<p>ಚೇಳ್ಯಾರುಗುತ್ತು ಎಸ್.ಆರ್.ಹೆಗ್ಡೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ ಇಂದಿರಾ ಹೆಗ್ಡೆ ಮಾತನಾಡಿ, ಸೃಜನಶೀಲ ಕವಿಗಳಿಗೆ ನೀಡುವ ಪ್ರಶಸ್ತಿಯ ಮೊತ್ತ ಏರಿಕೆಯಾಗುತ್ತ ಹೋಗುತ್ತಿದೆ. ಆದರೆ ಸಂಶೋಧಕರಿಗೆ ನೀಡುವ ಪ್ರಶಸ್ತಿಯ ಮೊತ್ತ ಏರಿಕೆಯಾಗಿಲ್ಲ. ಈ ಕಾರಣಕ್ಕೆ ಆ ಕ್ಷೇತ್ರದವರಿಗೆ ಒತ್ತು ನೀಡಿ ಈ ಪ್ರಶಸ್ತಿ ನೀಡಲಾಗಿದೆ ಎಂದರು.</p>.<p>ಇಂದು ಸಂಶೋಧಕರ ಪುಸ್ತಕಗಳನ್ನು ಮಾರುಕಟ್ಟೆಗೆ ತಲುಪಿಸುವವರೇ ಇಲ್ಲ. ಸಂಶೋಧಕರಿಗೆ ಬೆಂಬಲ ಮತ್ತು ಪ್ರೋತ್ಸಾಹದ ಅಗತ್ಯವಿದೆ ಎಂದು ಹೇಳಿದರು.</p>.<p>ಅಜ್ಜರಕಾಡು ಡಾ.ಜಿ.ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಇತಿಹಾಸ ಪ್ರಾಧ್ಯಾಪಕ ರಾಮದಾಸ ಪ್ರಭು ಅವರು ‘ತುಳುನಾಡಿನ ಪ್ರಭುತ್ವ ಹಾಗೂ ಧಾರ್ಮಿಕ ಪಂಥಗಳ’ ಬಗ್ಗೆ ಉಪನ್ಯಾಸ ನೀಡಿದರು.</p>.<p>ಮಂಗಳೂರಿನ ನಿಟ್ಟೆ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಮುಖ್ಯಸ್ಥೆ ಸಾಯಿಗೀತ ಪ್ರಶಸ್ತಿ ಪುರಸ್ಕೃತರನ್ನು ಪರಿಚಯಿಸಿದರು. ಎಂಜಿಎಂ ಕಾಲೇಜು ಪ್ರಾಂಶುಪಾಲ ಲಕ್ಷ್ಮಿನಾರಾಯಣ ಕಾರಂತ, ನಿವೃತ್ತ ಪ್ರಾಂಶುಪಾಲ ಗಣನಾಥ ಎಕ್ಕಾರು ಮಾತನಾಡಿದರು.</p>.<p>ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಬಿ.ಜಗದೀಶ್ ಶೆಟ್ಟಿ ಸ್ವಾಗತಿಸಿದರು. ಪದ್ಮಾವತಿ ಭಟ್ ಪ್ರಾರ್ಥನೆ ಹಾಡಿದರು. ಸಹಾಯಕ ಪ್ರಾಧ್ಯಾಪಕ ರಾಘವೇಂದ್ರ ತುಂಗ ವಂದಿಸಿದರು.</p>.<p>Quote - ತುಳು ಭಾಷೆಗಾಗಿ ಮಿಷನರಿಗಳು ಅಪಾರ ಕೊಡುಗೆ ನೀಡಿದ್ದಾರೆ. ಬಾಸೆಲ್ ಮಿಷನ್ನ ಮುದ್ರಣಾಲಯದಲ್ಲಿ ಮೊದಲು ಮುದ್ರಣಗೊಂಡಿದ್ದೇ ಪಾಡ್ದನ ಬೆನೆಟ್ ಜಿ. ಅಮ್ಮನ್ನ ನಿವೃತ್ತ ಪ್ರಾಧ್ಯಾಪಕ</p>.<p><strong>ಸಿರಿ ಬಗ್ಗೆ ಹೊಸ ಶೋಧ’</strong></p><p> ಬೆನೆಟ್ ಜಿ. ಅಮ್ಮನ್ನ ಅವರು ಸಿರಿ ಬಗ್ಗೆ ಹೊಸ ಶೋಧ ನಡೆಸಿದ್ದಾರೆ. ಈ ಕುರಿತ ಕೃತಿ ಅವರ ಸಂಪಾದಕತ್ವದಲ್ಲಿ ಶೀಘ್ರ ಹೊರಬರಲಿದೆ. ಹೊಸ ಶೋಧದ ಪ್ರಕಾರ ಸಿರಿಯ ಪಯಣ ಗೇರುಸೊಪ್ಪೆಯಿಂದ ಆರಂಭವಾಗುತ್ತದೆ. ಇದುವರೆಗೆ ಸಂಗ್ರಹಿಸಿರುವ ಯಾವ ಪಾಡ್ದನದಲ್ಲೂ ಗೇರುಸೊಪ್ಪೆಯ ಉಲ್ಲೇಖವಿರಲಿಲ್ಲ. ಈ ಕುರಿತು ಶಿವಳ್ಳಿ ಬ್ರಾಹ್ಮಣರ ಭಾಷೆಯಲ್ಲಿ ಬರೆದ ಕೃತಿಯು ಲಭ್ಯವಾಗಿದೆ. ಗೇರುಸೊಪ್ಪೆ ಮತ್ತು ತುಳುನಾಡಿಗಿರುವ ಸಂಬಂಧದ ಬಗ್ಗೆ ಹೆಚ್ಚಿನ ಅಧ್ಯಯನ ನಡೆಯುವ ಅಗತ್ಯವಿದೆ ಎಂದು ಎಂದು ಇಂದಿರಾ ಹೆಗ್ಡೆ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>