ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ: ತನಿಖೆಗೆ ಎಸ್‌ಪಿ ಸೂಚನೆ

Last Updated 9 ಜುಲೈ 2021, 12:45 IST
ಅಕ್ಷರ ಗಾತ್ರ

ಉಡುಪಿ: ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಕಾರ್ಕಳ ತಾಲ್ಲೂಕಿನ ಹಿರ್ಗಾನದ ರಾಧಾಕೃಷ್ಣ ನಾಯಕ್ ಅವರ ಮೇಲೆ ವರ್ಷದ ಹಿಂದಿನ ಸುಳ್ಳು ಪ್ರಕರಣದ ಕಾರಣವಿಟ್ಟುಕೊಂಡು ಕಾರ್ಕಳ ನಗರ ಠಾಣೆಗೆ ಕರೆಸಿ ಅಮಾನುಷವಾಗಿ ಹಲ್ಲೆ ನಡೆಸಲಾಗಿದೆ ಎಂದು ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಆರೋಪಿಸಿದ್ದಾರೆ.

ರಾಧಾಕೃಷ್ಣ ನಾಯಕ್ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿರುವ ಕಾರ್ಕಳ ನಗರ ಠಾಣೆಯ ಪಿಎಸ್‌ಐ ವರ್ತನೆ ಖಂಡನೀಯ. ಕೂಡಲೇ ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ವರ್ಷದ ಹಿಂದೆ ರಾಧಾಕೃಷ್ಣ ನಾಯಕ್‍ ಹೆಸರಲ್ಲಿ ಫೇಸ್‍ಬುಕ್‌ನಲ್ಲಿ ನಕಲಿ ಖಾತೆ ಸೃಷ್ಟಿಸಿ ದೇಶದ ಸೈನಿಕರ ಬಗ್ಗೆ ಅವಹೇಳನಕಾರಿ ಬರಹ ಹರಿಬಿಡಲಾಗಿತ್ತು. ಈ ಸಂಬಂಧ ರಾಧಾಕೃಷ್ಣ ಸೈಬರ್ ಅಪರಾಧ ಠಾಣೆಗೆ ದೂರು ಕೂಡ ನೀಡಿದ್ದರು. ಆದರೆ, ಕಾರ್ಕಳ ನಗರ ಠಾಣಾಧಿಕಾರಿ ನಕಲಿ ಖಾತೆ ಸೃಷ್ಟಿಸಿ ಸೈನಿಕರಿಗೆ ಅವಹೇಳನ ಮಾಡಿದವರನ್ನು ಪತ್ತೆಹಚ್ಚಿ ಶಿಕ್ಷಿಸುವ ಬದಲು, ದೂರುದಾರನನ್ನೇ ಠಾಣೆಗೆ ಕರೆಸಿ ಹಲ್ಲೆ ನಡೆಸಿದ್ದಾರೆ. ಇದರ ಹಿಂದೆ ವ್ಯವಸ್ಥಿತ ಪಿತೂರಿ ಅಡಗಿದೆ ಎಂದು ದೂರಿದ್ದಾರೆ.

ಹಲ್ಲೆ ಘಟನೆ ಸಂಬಂಧ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಕೂಡಲೇ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು. ಅಮಾಯಕ ಕಾರ್ಯಕರ್ತನಿಗೆ ನ್ಯಾಯ ಒದಗಿಸಬೇಕು. ಇಲ್ಲವಾದರೆ ಜಿಲ್ಲಾದ್ಯಂತ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಅಶೋಕ್ ಕುಮಾರ್ ಕೊಡವೂರು ತಿಳಿಸಿದ್ದಾರೆ.

ತನಿಖೆಗೆ ಡಿಎಸ್‌ಪಿಗೆ ಸೂಚನೆ: ಎಸ್‌ಪಿ

ಕಾರ್ಕಳದ ಹಿರ್ಗಾನದ ರಾಧಾಕೃಷ್ಣ ನಾಯಕ್ ಮೇಲೆ ಕಾರ್ಕಳ ನಗರ ಠಾಣೆ ಪಿಎಸ್‌ಐ ನಡೆಸಿದ್ದಾರೆ ಎನ್ನಲಾದ ಹಲ್ಲೆ ಘಟನೆ ಸಂಬಂಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕುಂದಾಪುರ ಡಿಎಸ್‌ಪಿಗೆ ಸೂಚಿಸಲಾಗಿದೆ. ವರದಿ ಸಲ್ಲಿಕೆಯಾದ ನಂತರ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುವುದಾಗಿ ಎಸ್‌ಪಿ ಎನ್‌.ವಿಷ್ಣುವರ್ಧನ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT