ವರ್ಷದ ಹಿಂದೆ ರಾಧಾಕೃಷ್ಣ ನಾಯಕ್ ಹೆಸರಲ್ಲಿ ಫೇಸ್ಬುಕ್ನಲ್ಲಿ ನಕಲಿ ಖಾತೆ ಸೃಷ್ಟಿಸಿ ದೇಶದ ಸೈನಿಕರ ಬಗ್ಗೆ ಅವಹೇಳನಕಾರಿ ಬರಹ ಹರಿಬಿಡಲಾಗಿತ್ತು. ಈ ಸಂಬಂಧ ರಾಧಾಕೃಷ್ಣ ಸೈಬರ್ ಅಪರಾಧ ಠಾಣೆಗೆ ದೂರು ಕೂಡ ನೀಡಿದ್ದರು. ಆದರೆ, ಕಾರ್ಕಳ ನಗರ ಠಾಣಾಧಿಕಾರಿ ನಕಲಿ ಖಾತೆ ಸೃಷ್ಟಿಸಿ ಸೈನಿಕರಿಗೆ ಅವಹೇಳನ ಮಾಡಿದವರನ್ನು ಪತ್ತೆಹಚ್ಚಿ ಶಿಕ್ಷಿಸುವ ಬದಲು, ದೂರುದಾರನನ್ನೇ ಠಾಣೆಗೆ ಕರೆಸಿ ಹಲ್ಲೆ ನಡೆಸಿದ್ದಾರೆ. ಇದರ ಹಿಂದೆ ವ್ಯವಸ್ಥಿತ ಪಿತೂರಿ ಅಡಗಿದೆ ಎಂದು ದೂರಿದ್ದಾರೆ.