ಕುಂದಾಪುರ: ‘ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕೋಟೇಶ್ವರ, ಕಾಳಾವರ ಹಾಗೂ ನಗರದ ಬರೇಕಟ್ಟು ಎನ್ನುವ ಪರಿಸರದಲ್ಲಿ ಈಚೆಗೆ ಮಕ್ಕಳನ್ನು ಅಪಹರಿಸಿಕೊಂಡು ಹೋಗುವ ಪ್ರಯತ್ನ ನಡೆದಿದೆ ಎನ್ನುವ ವದಂತಿ ಹಾಗೂ ಹರಿದಾಡುತ್ತಿರುವ ಫೋಟೊ, ವಿಡಿಯೊ ಇವು ಸತ್ಯಕ್ಕೆ ದೂರವಾಗಿದ್ದು, ಈ ರೀತಿಯ ಪ್ರಕರಣಗಳು ನಡೆದಿಲ್ಲ’ ಎಂದು ಕುಂದಾಪುರ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.