ನಿವೃತ್ತ ಪ್ರಾಧ್ಯಾಪಕ ಡಾ.ಶ್ರೀಕಾಂತ್ ಸಿದ್ದಾಪುರ ಮಾತನಾಡಿ, ವಿಬುಧೇಶ ಶ್ರೀಗಳು ಸಂತರಲ್ಲಿ ವಿಭಿನ್ನ ವ್ಯಕ್ತಿತ್ವ ಹೊಂದಿದ್ದವರು. ಸಂಸ್ಕೃತ, ತುಳು, ಕನ್ನಡ ಭಾಷೆಯ ಜತೆಗೆ ಇಂಗ್ಲೀಷ್ ಕೂಡ ಕಲಿತಿದ್ದರು. ವೇದ, ಉಪನಿಷತ್ತು, ಗೀತೆಯೊಂದಿಗೆ ವಿಜ್ಞಾನದ ಬಗ್ಗೆ ಆಸಕ್ತಿ ಹೊಂದಿದ್ದರು. ಬಾಲಕನಾಗಿರುವಾಗಲೇ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ದೇಶಪ್ರೇಮವನ್ನೂ ಮೆರೆದಿದ್ದರು. ಬಲಿಷ್ಠ ದೇಶ ನಿರ್ಮಾಣಕ್ಕಾಗಿ ಆಧ್ಯಾತ್ಮದೊಂದಿಗೆ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದರು. ಶಿಕ್ಷಣದಿಂದಲೇ ಪ್ರಗತಿ ಎಂಬುದು ಅವರ ನಿಲುವಾಗಿತ್ತು ಎಂದು ಸ್ಮರಿಸಿದರು.