ಹಲ್ಲೆಗೆ ಕಾರಣ:ಎಂದಿನಂತೆ ನಗರದ ಸಿಟಿ ಬಸ್ ನಿಲ್ದಾಣದ ಸುತ್ತಮುತ್ತ ಕಸ ಸಂಗ್ರಹಣೆಗೆ ಬಂದಿದ್ದ ಸಿಬ್ಬಂದಿ ಒಣ ಹಾಗೂ ಹಸಿ ಕಸವನ್ನು ಬೇರ್ಪಡಿಸಿ ಕೊಡುವಂತೆ ಅಂಗಡಿ ಮಾಲೀಕರಿಗೆ ಹೇಳಿದ್ದಾರೆ. ಇದರಿಂದ ಸಿಟ್ಟಿಗೆದ್ದ ಇಸ್ಮಾಯಿಲ್ ಹಾಗೂ ಸೋಹೆಲ್ ಕಸ ಬೇರ್ಪಡಿಸಿಕೊಳ್ಳುವಂತೆ ಪೌರ ಕಾರ್ಮಿಕರಿಗೆ ದಬಾಯಿಸಿದ್ದಾರೆ. ಈ ಸಂದರ್ಭ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಸಂಜು ಮಾದರ್ ಮೇಲೆ ಹಲ್ಲೆ ನಡೆದಿದೆ. ಆರೋಪಿಗಳ ವಿರುದ್ಧ ಹಲ್ಲೆ ಹಾಗೂ ಪರಿಶಿಷ್ಟ ಜಾತಿ ಹಾಗೂ ದೌರ್ಜನ್ಯ ತಡೆ ಕಾಯ್ದೆ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಉಡುಪಿ ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.