‘ರಾಜ್ಯದಲ್ಲಿ ಈಗಾಗಲೇ ಹಿಂದೂಗಳ ಹಾಗೂ ಬಿಜೆಪಿ ಕಾರ್ಯಕರ್ತರ ಸರಣಿ ಹತ್ಯೆಗಳು ನಡೆದಿವೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೇಂದ್ರ ಗೃಹ ಇಲಾಖೆ ಮಧ್ಯೆ ಪ್ರವೇಶಿಸಿ ಪಿಎಫ್ಐ, ಎಸ್ಡಿಪಿಐ ಹಾಗೂ ಇತರ ಮೂಲಭೂತವಾದಿ ಸಂಘಟನೆಗಳ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಜರುಗಿಸಬೇಕು. ಪ್ರಕರಣದಲ್ಲಿ ಭಯೋತ್ಪಾದಕ ಸಂಘಟನೆಗಳ ಹಾಗೂ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆದಿರುವ ಅನುಮಾನವಿದ್ದು, ಎನ್ಐಎ ತನಿಖೆಯಾಗಬೇಕು ಎಂದು ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.