ಉಡುಪಿ: ಕೋವಿಡ್ ಸೋಂಕು ನಿಯಂತ್ರಿಸಲು ಸರ್ಕಾರಧಾರ್ಮಿಕ ಸ್ಥಳಗಳಲ್ಲಿ 20ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ ಎಂಬ ನಿಯಮ ಜಾರಿಗೆ ತಂದಿದ್ದು, ಅದರಂತೆ ಉಡುಪಿ ಜಾಮಿಯಾ ಮಸೀದಿ ವ್ಯಾಪ್ತಿಯಲ್ಲಿ ಸಾಮೂಹಿಕ ನಮಾಜ್ ಅನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದು, ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಎಲ್ಲರೂಮನೆಯಲ್ಲಿಯೇ ನಮಾಜ್ ನಿರ್ವಹಿಸುವಂತೆಉಡುಪಿ ಜಾಮಿಯಾ ಮಸೀದಿಅಧ್ಯಕ್ಷರು ಮನವಿ ಮಾಡಿದ್ದಾರೆ.