<p><strong>ಉಡುಪಿ:</strong> ಸೊಂಟ ಮುರಿದುಕೊಂಡು ಶಸ್ತ್ರಚಿಕಿತ್ಸೆಗೊಳಗಾಗಿ ಅನಾಥ ಸ್ಥಿತಿಯಲ್ಲಿರುವ 75 ವರ್ಷದ ವೃದ್ಧೆಯ ಬದುಕಿಗೆ ಜಿಲ್ಲಾಡಳಿತವಾಗಲಿ, ಸಂಬಂಧಪಟ್ಟ ಇಲಾಖೆಯಾಗಲಿ ನೆರವಾಗಬೇಕು ಎಂದು ಸಮಾಜ ಸೇವಕ ವಿಶುಶೆಟ್ಟಿ ಅಂಬಲಪಾಡಿ ಆಗ್ರಹಿಸಿದರು.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 8 ತಿಂಗಳ ಹಿಂದೆ ಸೊಂಟದ ಮೂಳೆ ಮುರಿದುಕೊಂಡು ಸ್ವಾಧೀನ ಕಳೆದುಕೊಂಡಿದ್ದ ಶಿರಿಯಾರ ಕಾಜರವಳ್ಳಿಯ ವೃದ್ಧೆ ನರ್ಸಿ ಮರಕಾಲ್ತಿ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಸೂಕ್ತ ಚಿಕಿತ್ಸಾ ಸೌಲಭ್ಯಗಲಿಲ್ಲದ ಕಾರಣ ಅಂಬಲಪಾಡಿಯ ಹೈಟೆಕ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಸಲಾಯಿತು.</p>.<p>ಆಸ್ಪತ್ರೆಯ ವೆಚ್ಚ ₹ 1.5 ಲಕ್ಷವಾಗಿದ್ದು, ದಾನಿಗಳು ₹ 1 ಲಕ್ಷದಷ್ಟು ನೆರವು ನೀಡಿದ್ದಾರೆ. ವೃದ್ಧೆಗೆ ನಾಲ್ಕು ತಿಂಗಳು ಪಾಲನೆ ಪೋಷಣೆಯ ಅಗತ್ಯವಿದ್ದು ಜಿಲ್ಲಾಡಳಿತ ಅಥವಾ ಸಂಬಂಧಪಟ್ಟ ಇಲಾಖೆಗಳು ವೃದ್ಧೆಯ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ನಿರ್ಗತಿಕರ, ಅಶಕ್ತರಿಗೆ ನೆಲೆ ಕಲ್ಪಿಸಬೇಕಾಗಿರುವುದು ಸಂಬಂಧಪಟ್ಟ ಇಲಾಖೆಗಳ ಜವಾಬ್ದಾರಿ. ಆದರೆ, ಜಿಲ್ಲೆಯಲ್ಲಿ ನೂರಾರು ನಿರ್ಗತಿಕರು ಚಿಕಿತ್ಸೆ ಪಡೆಯಲಾಗದೆ ರಸ್ತೆಬದಿ, ನಿರ್ಜನ ಪ್ರದೇಶಗಳಲ್ಲಿ ಬಿದ್ದಿದ್ದರೂ ಅವರ ರಕ್ಷಣೆಗೆ ಯಾವ ಇಲಾಖೆ ಮುಂದಾಗುತ್ತಿಲ್ಲ. ಜಿಲ್ಲೆಯಲ್ಲಿ ನಿರ್ಗತಿಕರ ಪುನರ್ವಸತಿ ಕೇಂದ್ರ ಕೂಡ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಸೊಂಟ ಮುರಿದುಕೊಂಡು ಶಸ್ತ್ರಚಿಕಿತ್ಸೆಗೊಳಗಾಗಿ ಅನಾಥ ಸ್ಥಿತಿಯಲ್ಲಿರುವ 75 ವರ್ಷದ ವೃದ್ಧೆಯ ಬದುಕಿಗೆ ಜಿಲ್ಲಾಡಳಿತವಾಗಲಿ, ಸಂಬಂಧಪಟ್ಟ ಇಲಾಖೆಯಾಗಲಿ ನೆರವಾಗಬೇಕು ಎಂದು ಸಮಾಜ ಸೇವಕ ವಿಶುಶೆಟ್ಟಿ ಅಂಬಲಪಾಡಿ ಆಗ್ರಹಿಸಿದರು.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 8 ತಿಂಗಳ ಹಿಂದೆ ಸೊಂಟದ ಮೂಳೆ ಮುರಿದುಕೊಂಡು ಸ್ವಾಧೀನ ಕಳೆದುಕೊಂಡಿದ್ದ ಶಿರಿಯಾರ ಕಾಜರವಳ್ಳಿಯ ವೃದ್ಧೆ ನರ್ಸಿ ಮರಕಾಲ್ತಿ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಸೂಕ್ತ ಚಿಕಿತ್ಸಾ ಸೌಲಭ್ಯಗಲಿಲ್ಲದ ಕಾರಣ ಅಂಬಲಪಾಡಿಯ ಹೈಟೆಕ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಸಲಾಯಿತು.</p>.<p>ಆಸ್ಪತ್ರೆಯ ವೆಚ್ಚ ₹ 1.5 ಲಕ್ಷವಾಗಿದ್ದು, ದಾನಿಗಳು ₹ 1 ಲಕ್ಷದಷ್ಟು ನೆರವು ನೀಡಿದ್ದಾರೆ. ವೃದ್ಧೆಗೆ ನಾಲ್ಕು ತಿಂಗಳು ಪಾಲನೆ ಪೋಷಣೆಯ ಅಗತ್ಯವಿದ್ದು ಜಿಲ್ಲಾಡಳಿತ ಅಥವಾ ಸಂಬಂಧಪಟ್ಟ ಇಲಾಖೆಗಳು ವೃದ್ಧೆಯ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ನಿರ್ಗತಿಕರ, ಅಶಕ್ತರಿಗೆ ನೆಲೆ ಕಲ್ಪಿಸಬೇಕಾಗಿರುವುದು ಸಂಬಂಧಪಟ್ಟ ಇಲಾಖೆಗಳ ಜವಾಬ್ದಾರಿ. ಆದರೆ, ಜಿಲ್ಲೆಯಲ್ಲಿ ನೂರಾರು ನಿರ್ಗತಿಕರು ಚಿಕಿತ್ಸೆ ಪಡೆಯಲಾಗದೆ ರಸ್ತೆಬದಿ, ನಿರ್ಜನ ಪ್ರದೇಶಗಳಲ್ಲಿ ಬಿದ್ದಿದ್ದರೂ ಅವರ ರಕ್ಷಣೆಗೆ ಯಾವ ಇಲಾಖೆ ಮುಂದಾಗುತ್ತಿಲ್ಲ. ಜಿಲ್ಲೆಯಲ್ಲಿ ನಿರ್ಗತಿಕರ ಪುನರ್ವಸತಿ ಕೇಂದ್ರ ಕೂಡ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>