ಕೋಮು ಸೌಹಾರ್ದ ವೇದಿಕೆ ಅಧ್ಯಕ್ಷ ಜಿ.ರಾಜಶೇಖರ್ ಮಾತನಾಡಿ, ಬಂಧನಕ್ಕೊಳಗಾಗಿರುವ ನರಸಿಂಹ ಮೂರ್ತಿ ಸ್ವರಾಜ್ ಪಕ್ಷದ ರಾಜ್ಯ ಕಾರ್ಯದರ್ಶಿ ಹಾಗೂ ಗೌರಿ ಮೀಡಿಯಾ ಟ್ರಸ್ಟ್ ಕಾರ್ಯದರ್ಶಿಯಾಗಿದ್ದಾರೆ. ಮೂರು ದಶಕಗಳಿಂದ ಸಾಮಾಜಿಕ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದಾರೆ. ಇಂಥ ವ್ಯಕ್ತಿಯನ್ನು ವಿಚಾರಣೆ ನೆಪದಲ್ಲಿ ಬಂಧಿಸಿದ್ದು ಖಂಡನೀಯ ಎಂದರು.