<p><strong>ಉಡುಪಿ</strong>: ‘ಯಾವುದೇ ಅನುದಾನ ಬಿಡುಗಡೆ ಮಾಡದೆ ಸರ್ಕಾರವು ಕರಾವಳಿ ಜಿಲ್ಲೆಗಳನ್ನು ನಿರ್ಲಕ್ಷಿಸಿದ್ದು, ಈ ಧೋರಣೆ ಮುಂದುವರಿಸಿದರೆ ಮೂರೂ ಜಿಲ್ಲೆಗಳ ಶಾಸಕರು ಮುಖ್ಯಮಂತ್ರಿ ಮನೆ ಮುಂದೆ ಧರಣಿ ಮಾಡಬೇಕಾಗುತ್ತದೆ’ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೇಳಿದರು.</p><p>ನಗರದ ಕಿದಿಯೂರು ಹೋಟೆಲ್ನಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಡಲ್ಕೊರೆತಕ್ಕೆ ಪರಿಹಾರ ಹಾಗೂ ರಸ್ತೆಗಳ ದುರಸ್ತಿಗೆ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.</p><p>10 ದಿನಗಳೊಳಗೆ ಮುಖ್ಯಮಂತ್ರಿ ಈ ಕುರಿತು ಕ್ರಮಕೈಗೊಳ್ಳಬೇಕು, ಇಲ್ಲದಿದ್ದರೆ ಧರಣಿ ನಡೆಸುತ್ತೇವೆ. ಸರ್ಕಾರ ಉದ್ಧಟತನ ತೋರಿದರೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜನಾಂದೋಲನ ಹಮ್ಮಿಕೊಳ್ಳಲಾಗುವುದು ಎಂದರು.</p><p>ಕಳೆದ ವರ್ಷ ಮುಖ್ಯಮಂತ್ರಿ ನೇತೃತ್ವದಲ್ಲಿ ಉಡುಪಿಯಲ್ಲಿ ನಡೆದಿದ್ದ ಕೆಡಿಪಿ ಸಭೆಯಲ್ಲಿ ಕೈಗೊಂಡಿದ್ದ ನಿರ್ಣಯಗಳು ಅನುಷ್ಠಾನಕ್ಕೆ ಬಂದಿಲ್ಲ. ಈ ಬಾರಿಯ ಮಳೆಗೆ ಉಡುಪಿ ಜಿಲ್ಲೆಯಲ್ಲಿ ₹240 ಕೋಟಿ ನಷ್ಟ ಉಂಟಾಗಿದೆ ಎಂದು ಜಿಲ್ಲಾಡಳಿತ ವರದಿ ಸಲ್ಲಿಸಿದರೂ ಈ ತನಕ ನಯಾ ಪೈಸೆ ಬಿಡುಗಡೆಯಾಗಿಲ್ಲ ಎಂದರು.</p><p>ತಾಲ್ಲೂಕು ಮಟ್ಟದ ಆಧಿಕಾರಿಗಳನ್ನು ನಿರಂತರವಾಗಿ ವರ್ಗಾವಣೆ ಮಾಡಲಾಗುತ್ತಿದೆ. ಶಾಸಕರ ಜೊತೆ ಜಿಲ್ಲಾಡಳಿತವು ಅಸಹಕಾರ ಧೋರಣೆ ಮುಂದುವರಿಸಿದೆ ಎಂದರು.</p><p>ಸರ್ಕಾರವು ಸುತ್ತೋಲೆ ಹೊರಡಿಸುವ ಮೂಲಕ ರಾಜ್ಯ ಮಟ್ಟದಲ್ಲಿ11 ಲಕ್ಷ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದು ಮಾಡಲು ಹೊರಟಿದೆ. ಜಿಲ್ಲೆಯಲ್ಲೂ ಅಂದಾಜು 40 ಸಾವಿರದಷ್ಟು ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಮುಂದಾಗಿದ್ದು, ಇದರ ವಿರುದ್ಧ ಹೋರಾಟ ನಡೆಸಲಿದ್ದೇವೆ ಎಂದರು.</p><p>ಕಸ್ತೂರಿ ರಂಗನ್ ವರದಿ ಅನುಷ್ಠಾನ ನೆಪದಲ್ಲಿ ಜನವಸತಿ ಪ್ರದೇಶಗಳಿಗೆ ಮತ್ತು ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಬಾರದು. ಈ ಕುರಿತಂತೆ ವ್ಯಾಪಕ ಚರ್ಚೆ ನಡೆಯಬೇಕು ಎಂದು ಹೇಳಿದರು.</p><p>ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ‘ಯಾವುದೇ ಅನುದಾನ ಬಿಡುಗಡೆ ಮಾಡದೆ ಸರ್ಕಾರವು ಕರಾವಳಿ ಜಿಲ್ಲೆಗಳನ್ನು ನಿರ್ಲಕ್ಷಿಸಿದ್ದು, ಈ ಧೋರಣೆ ಮುಂದುವರಿಸಿದರೆ ಮೂರೂ ಜಿಲ್ಲೆಗಳ ಶಾಸಕರು ಮುಖ್ಯಮಂತ್ರಿ ಮನೆ ಮುಂದೆ ಧರಣಿ ಮಾಡಬೇಕಾಗುತ್ತದೆ’ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೇಳಿದರು.</p><p>ನಗರದ ಕಿದಿಯೂರು ಹೋಟೆಲ್ನಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಡಲ್ಕೊರೆತಕ್ಕೆ ಪರಿಹಾರ ಹಾಗೂ ರಸ್ತೆಗಳ ದುರಸ್ತಿಗೆ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.</p><p>10 ದಿನಗಳೊಳಗೆ ಮುಖ್ಯಮಂತ್ರಿ ಈ ಕುರಿತು ಕ್ರಮಕೈಗೊಳ್ಳಬೇಕು, ಇಲ್ಲದಿದ್ದರೆ ಧರಣಿ ನಡೆಸುತ್ತೇವೆ. ಸರ್ಕಾರ ಉದ್ಧಟತನ ತೋರಿದರೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜನಾಂದೋಲನ ಹಮ್ಮಿಕೊಳ್ಳಲಾಗುವುದು ಎಂದರು.</p><p>ಕಳೆದ ವರ್ಷ ಮುಖ್ಯಮಂತ್ರಿ ನೇತೃತ್ವದಲ್ಲಿ ಉಡುಪಿಯಲ್ಲಿ ನಡೆದಿದ್ದ ಕೆಡಿಪಿ ಸಭೆಯಲ್ಲಿ ಕೈಗೊಂಡಿದ್ದ ನಿರ್ಣಯಗಳು ಅನುಷ್ಠಾನಕ್ಕೆ ಬಂದಿಲ್ಲ. ಈ ಬಾರಿಯ ಮಳೆಗೆ ಉಡುಪಿ ಜಿಲ್ಲೆಯಲ್ಲಿ ₹240 ಕೋಟಿ ನಷ್ಟ ಉಂಟಾಗಿದೆ ಎಂದು ಜಿಲ್ಲಾಡಳಿತ ವರದಿ ಸಲ್ಲಿಸಿದರೂ ಈ ತನಕ ನಯಾ ಪೈಸೆ ಬಿಡುಗಡೆಯಾಗಿಲ್ಲ ಎಂದರು.</p><p>ತಾಲ್ಲೂಕು ಮಟ್ಟದ ಆಧಿಕಾರಿಗಳನ್ನು ನಿರಂತರವಾಗಿ ವರ್ಗಾವಣೆ ಮಾಡಲಾಗುತ್ತಿದೆ. ಶಾಸಕರ ಜೊತೆ ಜಿಲ್ಲಾಡಳಿತವು ಅಸಹಕಾರ ಧೋರಣೆ ಮುಂದುವರಿಸಿದೆ ಎಂದರು.</p><p>ಸರ್ಕಾರವು ಸುತ್ತೋಲೆ ಹೊರಡಿಸುವ ಮೂಲಕ ರಾಜ್ಯ ಮಟ್ಟದಲ್ಲಿ11 ಲಕ್ಷ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದು ಮಾಡಲು ಹೊರಟಿದೆ. ಜಿಲ್ಲೆಯಲ್ಲೂ ಅಂದಾಜು 40 ಸಾವಿರದಷ್ಟು ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಮುಂದಾಗಿದ್ದು, ಇದರ ವಿರುದ್ಧ ಹೋರಾಟ ನಡೆಸಲಿದ್ದೇವೆ ಎಂದರು.</p><p>ಕಸ್ತೂರಿ ರಂಗನ್ ವರದಿ ಅನುಷ್ಠಾನ ನೆಪದಲ್ಲಿ ಜನವಸತಿ ಪ್ರದೇಶಗಳಿಗೆ ಮತ್ತು ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಬಾರದು. ಈ ಕುರಿತಂತೆ ವ್ಯಾಪಕ ಚರ್ಚೆ ನಡೆಯಬೇಕು ಎಂದು ಹೇಳಿದರು.</p><p>ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>