ಕೋವಿಡ್ ಸಂಕಷ್ಟದ ಸಂದರ್ಭದಲ್ಲೂ ಕೇಂದ್ರ ಸರ್ಕಾರ ರಾಜ್ಯಗಳಿಗೆ ಕೊಡಬೇಕಾದ ಜಿಎಸ್ಟಿ ಪಾಲನ್ನು ನೀಡದಿರುವುದು ಖಂಡನೀಯ. ರಾಜ್ಯದ ಕೂಲಿಕಾರರು, ರೈತರು, ಕಸುಬುದಾರರು, ಕಾರ್ಮಿಕರು, ವಿದ್ಯಾವಂತ ನಿರುದ್ಯೋಗಿಗಳಿಗೆ ನೆರವು ನೀಡಬೇಕು. ಉಚಿತ ಹಾಗೂ ಸಾರ್ವತ್ರಿಕ ಲಸಿಕಾ ಅಭಿಯಾನಕ್ಕೆ ಕ್ರಮವಹಿಸಬೇಕು. ಬೆಡ್, ಲಸಿಕೆ ಅವ್ಯವಹಾರವನ್ನು ತನಿಖೆಗೊಳಪಡಿಸಬೇಕು. ಕೋವಿಡ್ನಿಂದ ಮೃತರಾದ ನಾಗರಿಕರಿಗೆ ಹಾಗೂ ಅನಾಥ ಮಕ್ಕಳಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.