‘ಪ್ರಧಾನ ಮಂತ್ರಿಗಳು, ಬಿಜೆಪಿ ಅಧ್ಯಕ್ಷರು ಮತ್ತು ಎನ್ಡಿಎ ಮಿತ್ರಪಕ್ಷಗಳ ಜತೆ ಚರ್ಚಿಸಿ ಬಜೆಟ್ ಅಧಿವೇಶನದ ಎರಡನೇ ಭಾಗದ ಕಲಾಪಗಳ ವೇತನ ತ್ಯಜಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಜನರ ಸೇವೆ ಮಾಡುವುದಕ್ಕಾಗಿ ನಮಗೆ ಈ ಹಣ ನೀಡಲಾಗುತ್ತಿದೆ. ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಯಾವುದೇ ವಿಷಯ ಕಲಾಪದಲ್ಲಿ ಚರ್ಚೆಯಾಗಿಲ್ಲ ಎಂದ ಮೇಲೆ ನಮಗೆ ಆ ಹಣ ಪಡೆಯಲು ಅಧಿಕಾರವಿಲ್ಲ. ಅದನ್ನು ಜನರಿಗೇ ವಾಪಸ್ ನೀಡುತ್ತಿದ್ದೇವೆ’ ಎಂದು ಅನಂತಕುಮಾರ್ ಹೇಳಿದ್ದಾರೆ.