‘ಹೊರರಾಜ್ಯದಿಂದ ಬಂದರೆ ನೇರವಾಗಿ ಮನೆಗೆ ಸೇರಲು ಅವಕಾಶ ಇಲ್ಲ ಎನ್ನುವುದನ್ನು ಅರಿತಿರುವ ಮನೆಯವರು ಮತ್ತು ಅಕ್ಕಪಕ್ಕದವರು ಅವನನ್ನು ಮನೆಗೆ ಸೇರಿಸಿಕೊಳ್ಳಲಿಲ್ಲ. ಅವನು ಹಾಗೆ ಬಂದಿರುವ ವಿಷಯವನ್ನು ಅವರು ಗ್ರಾಮ ಪಂಚಾಯಿತಿ ಆಡಳಿತದ ಗಮನಕ್ಕೆ ತಂದರು. ಅವರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಿಗೆ ತಿಳಿಸಿದರು. ವೈದ್ಯರು ಅವನನ್ನು ಕುಂದಾಪುರದಲ್ಲಿ ಪ್ರಾಥಮಿಕ ಪರೀಕ್ಷೆ ನಡೆಸಿ, ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಿದರು’ ಎಂದು ತಿಳಿದುಬಂದಿದೆ.