<p><strong>ಉಡುಪಿ</strong>: ಹೊರ ದೇಶಗಳು ಹಾಗೂ ರಾಜ್ಯಗಳಿಂದ ಜಿಲ್ಲೆಗೆ ಬರುವವರಿಗೆ ಕ್ವಾರಂಟೈನ್ ಮಾಡಲು ಖಾಸಗಿ ಶಾಲಾ ಮತ್ತು ಕಾಲೇಜುಗಳು ತಮ್ಮ ಒಡೆತನದ ಕಟ್ಟಡಗಳು ಮತ್ತು ಹಾಸ್ಟೆಲ್ಗಳನ್ನು ಜಿಲ್ಲಾಡಳಿತಕ್ಕೆ ಬಿಟ್ಟುಕೊಡಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.</p>.<p>ಶುಕ್ರವಾರ ರಜತಾದ್ರಿಯ ಸಭಾಂಗಣದಲ್ಲಿ ನಡೆದ ಸರ್ಕಾರಿ ಮತ್ತು ಖಾಸಗಿ ಶಾಲಾ ಮುಖ್ಯೋಪಾಧ್ಯಾಯರ ಹಾಗೂ ವಸತಿ ಶಾಲೆಗಳ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿದರು.</p>.<p>ವಿದೇಶಗಳಿಂದ ಹಾಗೂ ಹೊರ ರಾಜ್ಯಗಳಿಂದ ಬರುವವರಿಂದ ಸಂಭಾವ್ಯ ಸೋಂಕು ಹರಡುವಿಕೆ ತಪ್ಪಿಸುವುದು ಸವಾಲಿನ ಕೆಲಸ. ಅದಕ್ಕಾಗಿ ಹೊರಗಿನಿಂದ ಬರುವವರಿಗೆ ಕ್ವಾರಂಟೈನ್ ಮಾಡಲಾಗುತ್ತಿದ್ದು, ಇದಕ್ಕಾಗಿ ಜಿಲ್ಲೆಯ ಸರ್ಕಾರಿ, ಖಾಸಗಿ ಹಾಸ್ಟೆಲ್ಗಳು, ಶಾಲಾ ಕಾಲೇಜುಗಳು, ವಸತಿ ಶಾಲೆಗಳನ್ನು ಬಳಸಿಕೊಳ್ಳಲಾಗುತ್ತಿದೆ.</p>.<p>ಜಿಲ್ಲಾಡಳಿತ ಸೂಚನೆ ನೀಡಿದ ಕೂಡಲೇ ಸಂಬಂಧಪಟ್ಟ ಸಂಸ್ಥೆಗಳು ಸಬೂಬು ನೀಡದೆ ಕಟ್ಟಡಗಳನ್ನು ಜಿಲ್ಲಾಡಳಿತಕ್ಕೆ ಬಿಟ್ಟು ಕೊಡಬೇಕು. ಕಟ್ಟಡಕ್ಕೆ ಚಿಕ್ಕ ದುರಸ್ತಿಗಳಿದ್ದರೆ ತಕ್ಷಣ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.</p>.<p>ಕ್ವಾರಂಟೈನ್ಗೆ ಬಳಸುವ ಶಾಲಾ, ಕಾಲೇಜು ಕಟ್ಟಡಗಳನ್ನು ಕ್ವಾರಂಟೈನ್ ಅವಧಿ ಮುಗಿದ ಕೂಡಲೇ ಸಂಪೂರ್ಣವಾಗಿ ಶುಚಿಗೊಳಿಸಲಾಗುವುದು. ನಂತರ ಸಂಸ್ಥೆಗಳಿಗೆ ಬಿಟ್ಟುಕೊಡಲಾಗುವುದು ಎಂದು ತಿಳಿಸಿದರು.</p>.<p>ಜಿಲ್ಲೆಗೆ ಹೊರರಾಜ್ಯಗಳಿಂದ ಬರಲು ಪ್ರಥಮ ಹಂತದಲ್ಲಿ 6,000 ಮಂದಿ ನೋಂದಾಯಿಸಿಕೊಂಡಿದ್ದು, ಸರ್ಕಾರ ಅನುಮತಿ ನೀಡಿದ ಕೂಡಲೆ ಜಿಲ್ಲೆಗೆ ಬರಲಿದ್ದಾರೆ. ಬಂದವರನ್ನು ಜಿಲ್ಲೆಯ ಗಡಿಯಲ್ಲಿ ಆರೋಗ್ಯ ತಪಾಸಣೆ ಮಾಡಿ, ಪೊಲೀಸ್ ಭದ್ರತೆಯಲ್ಲಿ ಸಂಬಂಧಪಟ್ಟ ತಾಲ್ಲೂಕುಗಳ ಕ್ವಾರಂಟೈನ್ ಕೇಂದ್ರಗಳಿಗೆ ಕಳುಹಿಸಬೇಕು.</p>.<p>ಆರೋಗ್ಯ ಪರೀಕ್ಷೆಯಲ್ಲಿ ರೋಗ ಲಕ್ಷಣ ಕಂಡುಬಂದರೆ ಆಸ್ಪತ್ರೆಗೆ ದಾಖಲು ಮಾಡಬೇಕು. ಹೋಟೆಲ್ಗಳಲ್ಲಿ ಕ್ವಾರಂಟೈನ್ಲ್ಲಿರಲು ಬಯಸುವವರು ವಾಸ್ತವ್ಯ ವೆಚ್ಚವನ್ನು ಭರಿಸಬೇಕು. ಜಿಲ್ಲಾಡಳಿತ ವ್ಯವಸ್ಥೆ ಮಾಡುವ ಕೇಂದ್ರಗಳಲ್ಲಿ ಉಚಿತ ಊಟೋಪಚಾರದ ವ್ಯವಸ್ಥೆ ಇರಲಿದೆ ಎಂದರು.</p>.<p>ವಿದೇಶಗಳಿಂದ ಬರುವವರನ್ನು ಪ್ರತ್ಯೇಕವಾಗಿರಿಸಲು ಪ್ರತ್ಯೇಕ ಕೊಠಡಿಗಳನ್ನು ವ್ಯವಸ್ಥೆ ಮಾಡಲಾಗಿದೆ. ವಿದೇಶಗಳು ಹಾಗೂ ಹೊರ ರಾಜ್ಯಗಳಿಂದ ಜಿಲ್ಲೆಗೆ 20,000 ಜನ ಆಗಮಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.</p>.<p>ಜಿಲ್ಲಾ ಕೊರೊನಾ ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಭಟ್ ಮಾತನಾಡಿ, ಜಿಲ್ಲೆಯಲ್ಲಿ 12 ಚೆಕ್ಪೋಸ್ಟ್ಗಳಿದ್ದು, ಹೊರಗಿನಿಂದ ಬರುವವರಿಗೆ ಅಲ್ಲಿ ಆರೋಗ್ಯ ತಪಾಸಣೆ ನಡೆಸಿಯೇ ಪ್ರವೇಶ ನೀಡಲಾಗುತ್ತಿದೆ. ಕ್ವಾರಂಟೈನ್ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುವ ಸಂಸ್ಥೆಗಳ ಸಿಬ್ಬಂದಿಗೆ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.</p>.<p>ತಹಸೀಲ್ದಾರ್ಗಳು ತಮ್ಮ ವ್ಯಾಪ್ತಿಯರುವ ಶಾಲೆ, ಕಾಲೇಜು, ಹಾಸ್ಟೆಲ್ ಹಾಗೂ ಹೋಟೆಲ್ಗಳ ವಿವರಗಳನ್ನು ಸಂಗ್ರಹಿಸಿ. ಅಗತ್ಯವಿರುವೆಡೆ ಮೂಲಸೌಕರ್ಯಗಳನ್ನು ಒದಗಿಸಿ. ಜಿಲ್ಲಾಡಳಿತ ಸೂಚಿಸಿದ ಕೂಡಲೇ ಕ್ವಾರಂಟೈನ್ ಕೇಂದ್ರ ತೆರೆಯಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಡಿಎಚ್ಒ ಡಾ.ಸುದೀರ್ ಚಂದ್ರ ಸೂಡಾ, ಡಿಡಿಪಿಐ ಶೇಷಶಯನ ಕಾರಿಂಜ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಹೊರ ದೇಶಗಳು ಹಾಗೂ ರಾಜ್ಯಗಳಿಂದ ಜಿಲ್ಲೆಗೆ ಬರುವವರಿಗೆ ಕ್ವಾರಂಟೈನ್ ಮಾಡಲು ಖಾಸಗಿ ಶಾಲಾ ಮತ್ತು ಕಾಲೇಜುಗಳು ತಮ್ಮ ಒಡೆತನದ ಕಟ್ಟಡಗಳು ಮತ್ತು ಹಾಸ್ಟೆಲ್ಗಳನ್ನು ಜಿಲ್ಲಾಡಳಿತಕ್ಕೆ ಬಿಟ್ಟುಕೊಡಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.</p>.<p>ಶುಕ್ರವಾರ ರಜತಾದ್ರಿಯ ಸಭಾಂಗಣದಲ್ಲಿ ನಡೆದ ಸರ್ಕಾರಿ ಮತ್ತು ಖಾಸಗಿ ಶಾಲಾ ಮುಖ್ಯೋಪಾಧ್ಯಾಯರ ಹಾಗೂ ವಸತಿ ಶಾಲೆಗಳ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿದರು.</p>.<p>ವಿದೇಶಗಳಿಂದ ಹಾಗೂ ಹೊರ ರಾಜ್ಯಗಳಿಂದ ಬರುವವರಿಂದ ಸಂಭಾವ್ಯ ಸೋಂಕು ಹರಡುವಿಕೆ ತಪ್ಪಿಸುವುದು ಸವಾಲಿನ ಕೆಲಸ. ಅದಕ್ಕಾಗಿ ಹೊರಗಿನಿಂದ ಬರುವವರಿಗೆ ಕ್ವಾರಂಟೈನ್ ಮಾಡಲಾಗುತ್ತಿದ್ದು, ಇದಕ್ಕಾಗಿ ಜಿಲ್ಲೆಯ ಸರ್ಕಾರಿ, ಖಾಸಗಿ ಹಾಸ್ಟೆಲ್ಗಳು, ಶಾಲಾ ಕಾಲೇಜುಗಳು, ವಸತಿ ಶಾಲೆಗಳನ್ನು ಬಳಸಿಕೊಳ್ಳಲಾಗುತ್ತಿದೆ.</p>.<p>ಜಿಲ್ಲಾಡಳಿತ ಸೂಚನೆ ನೀಡಿದ ಕೂಡಲೇ ಸಂಬಂಧಪಟ್ಟ ಸಂಸ್ಥೆಗಳು ಸಬೂಬು ನೀಡದೆ ಕಟ್ಟಡಗಳನ್ನು ಜಿಲ್ಲಾಡಳಿತಕ್ಕೆ ಬಿಟ್ಟು ಕೊಡಬೇಕು. ಕಟ್ಟಡಕ್ಕೆ ಚಿಕ್ಕ ದುರಸ್ತಿಗಳಿದ್ದರೆ ತಕ್ಷಣ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.</p>.<p>ಕ್ವಾರಂಟೈನ್ಗೆ ಬಳಸುವ ಶಾಲಾ, ಕಾಲೇಜು ಕಟ್ಟಡಗಳನ್ನು ಕ್ವಾರಂಟೈನ್ ಅವಧಿ ಮುಗಿದ ಕೂಡಲೇ ಸಂಪೂರ್ಣವಾಗಿ ಶುಚಿಗೊಳಿಸಲಾಗುವುದು. ನಂತರ ಸಂಸ್ಥೆಗಳಿಗೆ ಬಿಟ್ಟುಕೊಡಲಾಗುವುದು ಎಂದು ತಿಳಿಸಿದರು.</p>.<p>ಜಿಲ್ಲೆಗೆ ಹೊರರಾಜ್ಯಗಳಿಂದ ಬರಲು ಪ್ರಥಮ ಹಂತದಲ್ಲಿ 6,000 ಮಂದಿ ನೋಂದಾಯಿಸಿಕೊಂಡಿದ್ದು, ಸರ್ಕಾರ ಅನುಮತಿ ನೀಡಿದ ಕೂಡಲೆ ಜಿಲ್ಲೆಗೆ ಬರಲಿದ್ದಾರೆ. ಬಂದವರನ್ನು ಜಿಲ್ಲೆಯ ಗಡಿಯಲ್ಲಿ ಆರೋಗ್ಯ ತಪಾಸಣೆ ಮಾಡಿ, ಪೊಲೀಸ್ ಭದ್ರತೆಯಲ್ಲಿ ಸಂಬಂಧಪಟ್ಟ ತಾಲ್ಲೂಕುಗಳ ಕ್ವಾರಂಟೈನ್ ಕೇಂದ್ರಗಳಿಗೆ ಕಳುಹಿಸಬೇಕು.</p>.<p>ಆರೋಗ್ಯ ಪರೀಕ್ಷೆಯಲ್ಲಿ ರೋಗ ಲಕ್ಷಣ ಕಂಡುಬಂದರೆ ಆಸ್ಪತ್ರೆಗೆ ದಾಖಲು ಮಾಡಬೇಕು. ಹೋಟೆಲ್ಗಳಲ್ಲಿ ಕ್ವಾರಂಟೈನ್ಲ್ಲಿರಲು ಬಯಸುವವರು ವಾಸ್ತವ್ಯ ವೆಚ್ಚವನ್ನು ಭರಿಸಬೇಕು. ಜಿಲ್ಲಾಡಳಿತ ವ್ಯವಸ್ಥೆ ಮಾಡುವ ಕೇಂದ್ರಗಳಲ್ಲಿ ಉಚಿತ ಊಟೋಪಚಾರದ ವ್ಯವಸ್ಥೆ ಇರಲಿದೆ ಎಂದರು.</p>.<p>ವಿದೇಶಗಳಿಂದ ಬರುವವರನ್ನು ಪ್ರತ್ಯೇಕವಾಗಿರಿಸಲು ಪ್ರತ್ಯೇಕ ಕೊಠಡಿಗಳನ್ನು ವ್ಯವಸ್ಥೆ ಮಾಡಲಾಗಿದೆ. ವಿದೇಶಗಳು ಹಾಗೂ ಹೊರ ರಾಜ್ಯಗಳಿಂದ ಜಿಲ್ಲೆಗೆ 20,000 ಜನ ಆಗಮಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.</p>.<p>ಜಿಲ್ಲಾ ಕೊರೊನಾ ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಭಟ್ ಮಾತನಾಡಿ, ಜಿಲ್ಲೆಯಲ್ಲಿ 12 ಚೆಕ್ಪೋಸ್ಟ್ಗಳಿದ್ದು, ಹೊರಗಿನಿಂದ ಬರುವವರಿಗೆ ಅಲ್ಲಿ ಆರೋಗ್ಯ ತಪಾಸಣೆ ನಡೆಸಿಯೇ ಪ್ರವೇಶ ನೀಡಲಾಗುತ್ತಿದೆ. ಕ್ವಾರಂಟೈನ್ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುವ ಸಂಸ್ಥೆಗಳ ಸಿಬ್ಬಂದಿಗೆ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.</p>.<p>ತಹಸೀಲ್ದಾರ್ಗಳು ತಮ್ಮ ವ್ಯಾಪ್ತಿಯರುವ ಶಾಲೆ, ಕಾಲೇಜು, ಹಾಸ್ಟೆಲ್ ಹಾಗೂ ಹೋಟೆಲ್ಗಳ ವಿವರಗಳನ್ನು ಸಂಗ್ರಹಿಸಿ. ಅಗತ್ಯವಿರುವೆಡೆ ಮೂಲಸೌಕರ್ಯಗಳನ್ನು ಒದಗಿಸಿ. ಜಿಲ್ಲಾಡಳಿತ ಸೂಚಿಸಿದ ಕೂಡಲೇ ಕ್ವಾರಂಟೈನ್ ಕೇಂದ್ರ ತೆರೆಯಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಡಿಎಚ್ಒ ಡಾ.ಸುದೀರ್ ಚಂದ್ರ ಸೂಡಾ, ಡಿಡಿಪಿಐ ಶೇಷಶಯನ ಕಾರಿಂಜ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>