ಸೋಂಕು ತಗುಲಿದರೂ ಕೆಲವರು ಮನೆಯಲ್ಲಿಯೇ ಇದ್ದು, ತಡವಾಗಿ ಚಿಕಿತ್ಸೆಗೆ ಬರುತ್ತಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ.ಸರ್ಕಾರ ರೋಗಿಗಳ ಜೀವ ಉಳಿಸಲು ಅಗತ್ಯ ಕ್ರಮಕೈಗೊಂಡಿದೆ. ಲಕ್ಷಣಗಳು ಕಂಡುಬಂದರೆ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ರೋಗ ಲಕ್ಷಣಗಳಿಲ್ಲದಿದ್ದರೆ, ಆರೋಗ್ಯ ಸಮಸ್ಯೆಗಳಿಲ್ಲದಿದ್ದರೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು ಎಂದು ಸಲಹೆ ನೀಡಿದರು.