ಹೆಜಮಾಡಿಯಲ್ಲಿ ದುಪ್ಪಟ್ಟು ಟೋಲ್: ಶಾಸಕ ರಘುಪತಿ ಭಟ್ ವಿರೋಧ

ಉಡುಪಿ: ಸುರತ್ಕಲ್ ಟೋಲ್ ಕೇಂದ್ರವನ್ನು ಹೆಜಮಾಡಿ ಟೋಲ್ ಕೇಂದ್ರದ ಜತೆಗೆ ವಿಲೀನಗೊಳಿಸಿ ವಾಹನ ಸವಾರರಿಂದ ದುಪ್ಪಟ್ಟು ಟೋಲ್ ಸಂಗ್ರಹ ಮಾಡುವ ನಿರ್ಧಾರ ಸರಿಯಲ್ಲ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ವಿರೋಧ ವ್ಯಕ್ತಪಡಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುರತ್ಕಲ್ ಟೋಲ್ಗೂ, ಹೆಜಮಾಡಿ ಟೋಲ್ಗೂ ಸಂಬಂಧವಿಲ್ಲ. ಸುರತ್ಕಲ್ ಟೋಲ್ ರದ್ದು ಮಾಡಿದ್ದು ಸರಿಯಾಗಿದೆ. ಆದರೆ ಹೆಜಮಾಡಿ ಟೋಲ್ನಲ್ಲಿ ಹೆಚ್ಚುವರಿಯಾಗಿ ಟೋಲ್ ಸಂಗ್ರಹ ಮಾಡಲು ನಿರ್ಧರಿಸಿರುವುದು ಖಂಡನೀಯ. ಇದರಿಂದ ಉಡುಪಿ ಜಿಲ್ಲೆಯ ಜನತೆಗೆ ಹೊರೆಯಾಗಲಿದೆ. ಮುಲ್ಕಿಗೆ ಹೋಗುವ ಜಿಲ್ಲೆಯ ಸಾರ್ವಜನಿಕರು ದುಪ್ಪಟ್ಟು ಟೋಲ್ ಕಟ್ಟಬೇಕಾಗುತ್ತದೆ ಎಂದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕ್ರಮದ ವಿರುದ್ಧ ಕೇಂದ್ರ ಸರ್ಕಾರಕ್ಕೆ ಹಾಗೂ ಹೆದ್ದಾರಿ ಸಚಿವರಿಗೆ ಪತ್ರ ಬರೆಯಲಾಗುವುದು ಎಂದು ರಘುಪತಿ ಭಟ್ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.