ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಜಮಾಡಿಯಲ್ಲಿ ದುಪ್ಪಟ್ಟು ಟೋಲ್‌: ಶಾಸಕ ರಘುಪತಿ ಭಟ್ ವಿರೋಧ

Last Updated 26 ನವೆಂಬರ್ 2022, 15:59 IST
ಅಕ್ಷರ ಗಾತ್ರ

ಉಡುಪಿ: ಸುರತ್ಕಲ್‌ ಟೋಲ್ ಕೇಂದ್ರವನ್ನು ಹೆಜಮಾಡಿ ಟೋಲ್ ಕೇಂದ್ರದ ಜತೆಗೆ ವಿಲೀನಗೊಳಿಸಿ ವಾಹನ ಸವಾರರಿಂದ ದುಪ್ಪಟ್ಟು ಟೋಲ್ ಸಂಗ್ರಹ ಮಾಡುವ ನಿರ್ಧಾರ ಸರಿಯಲ್ಲ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್‌ ವಿರೋಧ ವ್ಯಕ್ತಪಡಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುರತ್ಕಲ್ ಟೋಲ್‌ಗೂ, ಹೆಜಮಾಡಿ ಟೋಲ್‌ಗೂ ಸಂಬಂಧವಿಲ್ಲ. ಸುರತ್ಕಲ್‌ ಟೋಲ್ ರದ್ದು ಮಾಡಿದ್ದು ಸರಿಯಾಗಿದೆ. ಆದರೆ ಹೆಜಮಾಡಿ ಟೋಲ್‌ನಲ್ಲಿ ಹೆಚ್ಚುವರಿಯಾಗಿ ಟೋಲ್ ಸಂಗ್ರಹ ಮಾಡಲು ನಿರ್ಧರಿಸಿರುವುದು ಖಂಡನೀಯ. ಇದರಿಂದ ಉಡುಪಿ ಜಿಲ್ಲೆಯ ಜನತೆಗೆ ಹೊರೆಯಾಗಲಿದೆ. ಮುಲ್ಕಿಗೆ ಹೋಗುವ ಜಿಲ್ಲೆಯ ಸಾರ್ವಜನಿಕರು ದುಪ್ಪಟ್ಟು ಟೋಲ್ ಕಟ್ಟಬೇಕಾಗುತ್ತದೆ ಎಂದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕ್ರಮದ ವಿರುದ್ಧ ಕೇಂದ್ರ ಸರ್ಕಾರಕ್ಕೆ ಹಾಗೂ ಹೆದ್ದಾರಿ ಸಚಿವರಿಗೆ ಪತ್ರ ಬರೆಯಲಾಗುವುದು ಎಂದು ರಘುಪತಿ ಭಟ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT