<p><strong>ಉಡುಪಿ</strong>: ಕರಾವಳಿ ಜಿಲ್ಲೆಗಳ ಎಲ್ಲಾ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲು ₹100 ಕೋಟಿಯ ಕಾಮಗಾರಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅನುಮೋದನೆ ನೀಡಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.<br><br>ಉಡುಪಿ ರೈಲು ನಿಲ್ದಾಣ ಪರಿಸರದಲ್ಲಿ ಕೊಂಕಣ ರೈಲ್ವೆ ಕಾರ್ಪೊರೇಷನ್ ನಿರ್ಮಿಸಿದ ಪ್ರಯಾಣಿಕರ ಸೌಲಭ್ಯಗಳ ಉದ್ಘಾಟನೆಯನ್ನು ಬುಧವಾರ ನೆರವೇರಿಸಿ ಅವರು ಮಾತನಾಡಿದರು.</p>.<p>ಮುಂದಿನ ದಿನಗಳಲ್ಲಿ ಪ್ರಥಮ ಹಂತದ ಕಾಮಗಾರಿಗಳಲ್ಲಿ ಪ್ಲಾಟ್ ಫಾರ್ಮ್ 2 ಅನ್ನು ₹2.6 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.</p>.<p>ಇಂದ್ರಾಳಿ ರೈಲು ನಿಲ್ದಾಣದಲ್ಲಿ ಹಿರಿಯ ನಾಗರಿಕರ ಅನುಕೂಲಕ್ಕಾಗಿ ಮೂರು ಲಿಫ್ಟ್ಗಳನ್ನು ಅಳವಡಿಸಲಾಗುವುದು. ಬಾರಕೂರು-ಮುಲ್ಕಿ ರೈಲ್ವೆ ಪ್ಲಾಟ್ ಫಾರ್ಮ್ಗಳನ್ನು ₹4.28 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಪ್ರಸಕ್ತ ಆರ್ಥಿಕ ಸಾಲಿನಲ್ಲಿ ₹ 105 ಕೋಟಿ ವೆಚ್ಚದಲ್ಲಿ 10 ರೈಲು ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗೆ ಕೇಂದ್ರದಿಂದ ಅನುಮೋದನೆ ದೊರೆಯಲಿದೆ ಎಂದು ಹೇಳಿದರು. <br><br>ಅಮೃತ ಭಾರತ ರೈಲು ನಿಲ್ದಾಣ ಯೋಜನೆಯಡಿ ಉಡುಪಿ ರೈಲು ನಿಲ್ದಾಣಕ್ಕೆ ಹೊಸ ಕಾಯಕಲ್ಪ ನೀಡಲಾಗುವುದು. ಮಂಗಳೂರಿನಿಂದ ಕಾರವಾರದವರೆಗೆ ದ್ವಿಪಥ ರೈಲ್ವೆ ಹಳಿಗಳು ಈಗಿನ ಅವಶ್ಯಕತೆಯಾಗಿದ್ದು, ಅದಕ್ಕಾಗಿ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಸಚಿವರಿಗೆ ಸಲ್ಲಿಸಲಾಗುವುದು ಎಂದರು.</p>.<p>ಮಡಗಾಂವ್ - ಮಂಗಳೂರು ವಂದೇ ಭಾರತ್ ರೈಲನ್ನು ಮುಂಬೈವರೆಗೆ ಮತ್ತು ಬೆಂಗಳೂರು-ಮಂಗಳೂರು ರೈಲನ್ನು ಕಾರವಾರದವರೆಗೆ ವಿಸ್ತರಣೆ ಮಾಡಿದಲ್ಲಿ ಕರಾವಳಿಯ ಜನರಿಗೆ ಅನುಕೂಲವಾಗಲಿದ್ದು, ಈ ನಿಟ್ಟಿನಲ್ಲಿ ಕೊಂಕಣ ರೈಲ್ವೆಯೊಂದಿಗೆ ಸಮಾಲೋಚಿಸಿ ಅಡಚಣೆಗಳನ್ನು ನಿವಾರಿಸುವ ಹಾಗೂ ಉಡುಪಿ ರೈಲು ನಿಲ್ದಾಣಕ್ಕೆ ಶ್ರೀಕೃಷ್ಣ ರೈಲು ನಿಲ್ದಾಣ ಎಂದು ಹೆಸರಿಸಲು ಪ್ರಯತ್ನ ನಡೆಸಲಾಗುವುದು ಎಂದರು.<br><br>ಕಾರ್ಯಕ್ರಮದಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕೊಂಕಣ ರೈಲ್ವೆ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಕುಮಾರ್ ಝಾ, ಕಾರವಾರ ವಲಯ ರೈಲ್ವೆ ವ್ಯವಸ್ಥಾಪಕಿ ಆಶಾ ಶೆಟ್ಟಿ ಭಾಗವಹಿಸಿದ್ದರು.</p>.<div><blockquote>ಉಡುಪಿ ರೈಲು ನಿಲ್ದಾಣದಲ್ಲಿ ₹ 2.40 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಪ್ರಯಾಣಿಕರ ಸೌಲಭ್ಯಗಳು ಜಿಲ್ಲಾಡಳಿತದ ಸಹಕಾರದೊಂದಿಗೆ ಲೋಕಾರ್ಪಣೆಗೊಂಡಿದೆ </blockquote><span class="attribution">ಕೋಟ ಶ್ರೀನಿವಾಸ ಪೂಜಾರಿ ಸಂಸದ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಕರಾವಳಿ ಜಿಲ್ಲೆಗಳ ಎಲ್ಲಾ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲು ₹100 ಕೋಟಿಯ ಕಾಮಗಾರಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅನುಮೋದನೆ ನೀಡಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.<br><br>ಉಡುಪಿ ರೈಲು ನಿಲ್ದಾಣ ಪರಿಸರದಲ್ಲಿ ಕೊಂಕಣ ರೈಲ್ವೆ ಕಾರ್ಪೊರೇಷನ್ ನಿರ್ಮಿಸಿದ ಪ್ರಯಾಣಿಕರ ಸೌಲಭ್ಯಗಳ ಉದ್ಘಾಟನೆಯನ್ನು ಬುಧವಾರ ನೆರವೇರಿಸಿ ಅವರು ಮಾತನಾಡಿದರು.</p>.<p>ಮುಂದಿನ ದಿನಗಳಲ್ಲಿ ಪ್ರಥಮ ಹಂತದ ಕಾಮಗಾರಿಗಳಲ್ಲಿ ಪ್ಲಾಟ್ ಫಾರ್ಮ್ 2 ಅನ್ನು ₹2.6 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.</p>.<p>ಇಂದ್ರಾಳಿ ರೈಲು ನಿಲ್ದಾಣದಲ್ಲಿ ಹಿರಿಯ ನಾಗರಿಕರ ಅನುಕೂಲಕ್ಕಾಗಿ ಮೂರು ಲಿಫ್ಟ್ಗಳನ್ನು ಅಳವಡಿಸಲಾಗುವುದು. ಬಾರಕೂರು-ಮುಲ್ಕಿ ರೈಲ್ವೆ ಪ್ಲಾಟ್ ಫಾರ್ಮ್ಗಳನ್ನು ₹4.28 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಪ್ರಸಕ್ತ ಆರ್ಥಿಕ ಸಾಲಿನಲ್ಲಿ ₹ 105 ಕೋಟಿ ವೆಚ್ಚದಲ್ಲಿ 10 ರೈಲು ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗೆ ಕೇಂದ್ರದಿಂದ ಅನುಮೋದನೆ ದೊರೆಯಲಿದೆ ಎಂದು ಹೇಳಿದರು. <br><br>ಅಮೃತ ಭಾರತ ರೈಲು ನಿಲ್ದಾಣ ಯೋಜನೆಯಡಿ ಉಡುಪಿ ರೈಲು ನಿಲ್ದಾಣಕ್ಕೆ ಹೊಸ ಕಾಯಕಲ್ಪ ನೀಡಲಾಗುವುದು. ಮಂಗಳೂರಿನಿಂದ ಕಾರವಾರದವರೆಗೆ ದ್ವಿಪಥ ರೈಲ್ವೆ ಹಳಿಗಳು ಈಗಿನ ಅವಶ್ಯಕತೆಯಾಗಿದ್ದು, ಅದಕ್ಕಾಗಿ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಸಚಿವರಿಗೆ ಸಲ್ಲಿಸಲಾಗುವುದು ಎಂದರು.</p>.<p>ಮಡಗಾಂವ್ - ಮಂಗಳೂರು ವಂದೇ ಭಾರತ್ ರೈಲನ್ನು ಮುಂಬೈವರೆಗೆ ಮತ್ತು ಬೆಂಗಳೂರು-ಮಂಗಳೂರು ರೈಲನ್ನು ಕಾರವಾರದವರೆಗೆ ವಿಸ್ತರಣೆ ಮಾಡಿದಲ್ಲಿ ಕರಾವಳಿಯ ಜನರಿಗೆ ಅನುಕೂಲವಾಗಲಿದ್ದು, ಈ ನಿಟ್ಟಿನಲ್ಲಿ ಕೊಂಕಣ ರೈಲ್ವೆಯೊಂದಿಗೆ ಸಮಾಲೋಚಿಸಿ ಅಡಚಣೆಗಳನ್ನು ನಿವಾರಿಸುವ ಹಾಗೂ ಉಡುಪಿ ರೈಲು ನಿಲ್ದಾಣಕ್ಕೆ ಶ್ರೀಕೃಷ್ಣ ರೈಲು ನಿಲ್ದಾಣ ಎಂದು ಹೆಸರಿಸಲು ಪ್ರಯತ್ನ ನಡೆಸಲಾಗುವುದು ಎಂದರು.<br><br>ಕಾರ್ಯಕ್ರಮದಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕೊಂಕಣ ರೈಲ್ವೆ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಕುಮಾರ್ ಝಾ, ಕಾರವಾರ ವಲಯ ರೈಲ್ವೆ ವ್ಯವಸ್ಥಾಪಕಿ ಆಶಾ ಶೆಟ್ಟಿ ಭಾಗವಹಿಸಿದ್ದರು.</p>.<div><blockquote>ಉಡುಪಿ ರೈಲು ನಿಲ್ದಾಣದಲ್ಲಿ ₹ 2.40 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಪ್ರಯಾಣಿಕರ ಸೌಲಭ್ಯಗಳು ಜಿಲ್ಲಾಡಳಿತದ ಸಹಕಾರದೊಂದಿಗೆ ಲೋಕಾರ್ಪಣೆಗೊಂಡಿದೆ </blockquote><span class="attribution">ಕೋಟ ಶ್ರೀನಿವಾಸ ಪೂಜಾರಿ ಸಂಸದ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>