<p><strong>ಉಡುಪಿ: </strong>ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಸೋಮವಾರ ರಾತ್ರಿ ಗುಡುಗು ಸಿಡಿಲು ಸಹಿತ ಬಿರುಸಾಗಿ ಮಳೆ ಸುರಿಯಿತು. ಏಕಾಏಕಿ ಗುಡುಗು, ಸಿಡಿಲು, ಗಾಳಿಯ ಅಬ್ಬರ ಕಂಡು ನಾಗರಿಕರು ಬೆಚ್ಚಿಬಿದ್ದರು.</p>.<p>ಸುಮಾರು 1 ತಾಸು ಎಡೆಬಿಡದೆ ಸುರಿದ ಮಳೆ ಅವಾಂತರ ಸೃಷ್ಟಿಸಿತು. ನಗರದ ರಸ್ತೆಗಳೆಲ್ಲ ನೀರಿನಿಂದ ಜಲಾವೃತಗೊಂಡು ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.</p>.<p>ನಗರದ ಬಹುತೇಕ ಬಡಾವಣೆಯಲ್ಲಿ ವಿದ್ಯುತ್ ಸಂಪರ್ಕ ಇರಲಿಲ್ಲ. ಬನ್ನಂಜೆ, ಮೂಡನಿಡಂಬೂರು ಭಾಗಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ.ಪಡುಬಿದ್ರಿಯಲ್ಲಿ ಕಡಲು ಪ್ರಕ್ಷುಬ್ಧಗೊಂಡಿದ್ದು ಕಡಲ್ಕೊರೆತ ಉಂಟಾಗಿದೆ.</p>.<p>ಬೈಂದೂರಿನಲ್ಲಿ ಮಧ್ಯಾಹ್ನ ಧಾರಾಕಾರ ಮಳೆಯಾಗಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡವು.ರಸ್ತೆಗಳ ಮೇಲೆ ನೀರು ಹರಿಯುತ್ತಿತ್ತು. ಉಡುಪಿ, ಕುಂದಾಪುರ, ಕಾರ್ಕಳ, ಬ್ರಹ್ಮಾವರ, ಕಾಪು, ಹೆಬ್ರಿ ಭಾಗಗಳಲ್ಲೂ ಉತ್ತಮ ಮಳೆಯಾಗಿದೆ.</p>.<p>ಬೈಂದೂರಿನಲ್ಲಿ ಎರಡು ಮನೆಗಳು ಹಾಗೂ ಬ್ರಹ್ಮಾವರದಲ್ಲಿ ಒಂದು ಮನೆಗೆ ಭಾಗಶಃ ಹಾನಿಯಾಗಿದೆ.ಕಳೆದ 24 ಗಂಟೆಗಳಲ್ಲಿ ಉಡುಪಿ 49, ಕುಂದಾಪುರ 59.1, ಕಾರ್ಕಳ 58 ಮಿ.ಮೀ ಸೇರಿ ಜಿಲ್ಲೆಯಲ್ಲಿ ಸರಾಸರಿ 56.1 ಮಿ.ಮೀ ಮಳೆಯಾಗಿದೆ.</p>.<p><strong>ಭಾರಿ ಮಳೆ: ಎಚ್ಚರಿಕೆ</strong></p>.<p>ಆಗಸ್ಟ್ 8 ಹಾಗೂ 9ರಂದು ಕರಾವಳಿ ಭಾಗಗಳಲ್ಲಿ 205 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಆ.6,7 ಹಾಗೂ 10ರಂದು 115 ಮಿ.ಮೀ ಗಿಂತ ಹೆಚ್ಚು ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಸೋಮವಾರ ರಾತ್ರಿ ಗುಡುಗು ಸಿಡಿಲು ಸಹಿತ ಬಿರುಸಾಗಿ ಮಳೆ ಸುರಿಯಿತು. ಏಕಾಏಕಿ ಗುಡುಗು, ಸಿಡಿಲು, ಗಾಳಿಯ ಅಬ್ಬರ ಕಂಡು ನಾಗರಿಕರು ಬೆಚ್ಚಿಬಿದ್ದರು.</p>.<p>ಸುಮಾರು 1 ತಾಸು ಎಡೆಬಿಡದೆ ಸುರಿದ ಮಳೆ ಅವಾಂತರ ಸೃಷ್ಟಿಸಿತು. ನಗರದ ರಸ್ತೆಗಳೆಲ್ಲ ನೀರಿನಿಂದ ಜಲಾವೃತಗೊಂಡು ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.</p>.<p>ನಗರದ ಬಹುತೇಕ ಬಡಾವಣೆಯಲ್ಲಿ ವಿದ್ಯುತ್ ಸಂಪರ್ಕ ಇರಲಿಲ್ಲ. ಬನ್ನಂಜೆ, ಮೂಡನಿಡಂಬೂರು ಭಾಗಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ.ಪಡುಬಿದ್ರಿಯಲ್ಲಿ ಕಡಲು ಪ್ರಕ್ಷುಬ್ಧಗೊಂಡಿದ್ದು ಕಡಲ್ಕೊರೆತ ಉಂಟಾಗಿದೆ.</p>.<p>ಬೈಂದೂರಿನಲ್ಲಿ ಮಧ್ಯಾಹ್ನ ಧಾರಾಕಾರ ಮಳೆಯಾಗಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡವು.ರಸ್ತೆಗಳ ಮೇಲೆ ನೀರು ಹರಿಯುತ್ತಿತ್ತು. ಉಡುಪಿ, ಕುಂದಾಪುರ, ಕಾರ್ಕಳ, ಬ್ರಹ್ಮಾವರ, ಕಾಪು, ಹೆಬ್ರಿ ಭಾಗಗಳಲ್ಲೂ ಉತ್ತಮ ಮಳೆಯಾಗಿದೆ.</p>.<p>ಬೈಂದೂರಿನಲ್ಲಿ ಎರಡು ಮನೆಗಳು ಹಾಗೂ ಬ್ರಹ್ಮಾವರದಲ್ಲಿ ಒಂದು ಮನೆಗೆ ಭಾಗಶಃ ಹಾನಿಯಾಗಿದೆ.ಕಳೆದ 24 ಗಂಟೆಗಳಲ್ಲಿ ಉಡುಪಿ 49, ಕುಂದಾಪುರ 59.1, ಕಾರ್ಕಳ 58 ಮಿ.ಮೀ ಸೇರಿ ಜಿಲ್ಲೆಯಲ್ಲಿ ಸರಾಸರಿ 56.1 ಮಿ.ಮೀ ಮಳೆಯಾಗಿದೆ.</p>.<p><strong>ಭಾರಿ ಮಳೆ: ಎಚ್ಚರಿಕೆ</strong></p>.<p>ಆಗಸ್ಟ್ 8 ಹಾಗೂ 9ರಂದು ಕರಾವಳಿ ಭಾಗಗಳಲ್ಲಿ 205 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಆ.6,7 ಹಾಗೂ 10ರಂದು 115 ಮಿ.ಮೀ ಗಿಂತ ಹೆಚ್ಚು ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>