<p><strong>ಉಡುಪಿ:</strong> ಕರಾವಳಿಯಲ್ಲಿ ಮತ್ತೆ ಮಳೆ ಬಿರುಸುಗೊಂಡಿದೆ. ಕಾರ್ಕಳ, ಸಿದ್ದಾಪುರ, ಕುಂದಾಪುರ, ಬೈಂದೂರು, ಕಾಪು, ಬ್ರಹ್ಮಾವರ ಭಾಗಗಳಲ್ಲಿ ಮಳೆ ಹೆಚ್ಚಾಗಿದ್ದು, ಪ್ರವಾಹ ಭೀತಿ ಸೃಷ್ಟಿಯಾಗಿದೆ.</p>.<p>ಕುಂದಾಪುರ ತಾಲ್ಲೂಕಿನ ಹಾಲಾಡಿ ಹೊಳೆ ತುಂಬಿ ಹರಿಯುತ್ತಿದೆ. ಬೈಂದೂರು ತಾಲ್ಲೂಕಿನಲ್ಲೂ ನದಿಗಳು ತುಂಬಿದ್ದು, ಮಳೆ ಮುಂದುವರಿದರೆ ಹಲವು ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಲಿದೆ.</p>.<p>ಸ್ವರ್ಣಾ ನದಿಯಲ್ಲಿ ಪ್ರವಾಹ ಸಾಧ್ಯತೆಯಿದ್ದು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಜಲ ಆಯೋಗ ಈಚೆಗೆ ಎಚ್ಚರಿಕೆ ನೀಡಿದ್ದು, ನದಿಪಾತ್ರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.</p>.<p><strong>ಕೃಷಿ ಭೂಮಿಗೆ ಹಾನಿ:</strong></p>.<p>ಜಿಲ್ಲೆಯಲ್ಲಿ ಭತ್ತದ ಗದ್ದೆ ಹಾಗೂ ತೋಟಗಾರಿಕಾ ಜಮೀನಿಗೆ ಮಳೆ ನೀರು ನುಗ್ಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಮಳೆಯಿಂದಾಗಿ 159 ರಸ್ತೆ, 43 ಸೇತುವೆ, 28 ಕಟ್ಟಡಗಳು ಸೇರಿ ₹ 19 ಕೋಟಿಗೂ ಹೆಚ್ಚು ನಷ್ಟ ಸಂಭವಿಸಿದೆ.</p>.<p><strong>ಕಡಲ್ಕೊರೆತ:</strong></p>.<p>ಕಡಲು ಪ್ರಕ್ಷುಬ್ಧಗೊಂಡಿದ್ದು ಅಲೆಗಳ ಉಬ್ಬರಕ್ಕೆ ಪಡುಬಿದ್ರಿ, ಪಡುಕೆರೆ, ಬೈಂದೂರು, ಮಲ್ಪೆಯಲ್ಲಿ ಕಡಲ್ಕೊರೆತ ಉಂಟಾಗಿದ್ದು 2,115 ಮೀಟರ್ ಕಡಲ್ಕೊರೆತ ಉಂಟಾಗಿದೆ. ಅಂದಾಜು ₹ 18.95 ಕೋಟಿ ನಷ್ಟ ಅಂದಾಜಿಸಲಾಗಿದೆ.</p>.<p><strong>5 ಸಾವು:</strong></p>.<p>ಈ ವರ್ಷ ಸುರಿದ ಮಳೆಗೆ ಜಿಲ್ಲೆಯಲ್ಲಿ 5 ಮಂದಿ ಮೃತಪಟ್ಟಿದ್ದು, ತಲಾ ₹ 5 ಲಕ್ಷದಂತೆ ₹ 15 ಲಕ್ಷ ಪರಿಹಾರ ನೀಡಲಾಗಿದೆ. 6 ಜಾನುವಾರು, 168 ಮನೆಗಳಿಗೆ ಭಾಗಶಃ, 2 ಮನೆಗಳಿಗೆ ಪೂರ್ಣ ಹಾನಿ, 8 ದನದ ಕೊಟ್ಟಿಗೆಗಳು ಮಳೆಗೆ ಬಿದ್ದಿವೆ. ಒಟ್ಟು ₹ 67.39 ಲಕ್ಷ ನಷ್ಟ ಅಂದಾಜಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಕರಾವಳಿಯಲ್ಲಿ ಮತ್ತೆ ಮಳೆ ಬಿರುಸುಗೊಂಡಿದೆ. ಕಾರ್ಕಳ, ಸಿದ್ದಾಪುರ, ಕುಂದಾಪುರ, ಬೈಂದೂರು, ಕಾಪು, ಬ್ರಹ್ಮಾವರ ಭಾಗಗಳಲ್ಲಿ ಮಳೆ ಹೆಚ್ಚಾಗಿದ್ದು, ಪ್ರವಾಹ ಭೀತಿ ಸೃಷ್ಟಿಯಾಗಿದೆ.</p>.<p>ಕುಂದಾಪುರ ತಾಲ್ಲೂಕಿನ ಹಾಲಾಡಿ ಹೊಳೆ ತುಂಬಿ ಹರಿಯುತ್ತಿದೆ. ಬೈಂದೂರು ತಾಲ್ಲೂಕಿನಲ್ಲೂ ನದಿಗಳು ತುಂಬಿದ್ದು, ಮಳೆ ಮುಂದುವರಿದರೆ ಹಲವು ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಲಿದೆ.</p>.<p>ಸ್ವರ್ಣಾ ನದಿಯಲ್ಲಿ ಪ್ರವಾಹ ಸಾಧ್ಯತೆಯಿದ್ದು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಜಲ ಆಯೋಗ ಈಚೆಗೆ ಎಚ್ಚರಿಕೆ ನೀಡಿದ್ದು, ನದಿಪಾತ್ರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.</p>.<p><strong>ಕೃಷಿ ಭೂಮಿಗೆ ಹಾನಿ:</strong></p>.<p>ಜಿಲ್ಲೆಯಲ್ಲಿ ಭತ್ತದ ಗದ್ದೆ ಹಾಗೂ ತೋಟಗಾರಿಕಾ ಜಮೀನಿಗೆ ಮಳೆ ನೀರು ನುಗ್ಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಮಳೆಯಿಂದಾಗಿ 159 ರಸ್ತೆ, 43 ಸೇತುವೆ, 28 ಕಟ್ಟಡಗಳು ಸೇರಿ ₹ 19 ಕೋಟಿಗೂ ಹೆಚ್ಚು ನಷ್ಟ ಸಂಭವಿಸಿದೆ.</p>.<p><strong>ಕಡಲ್ಕೊರೆತ:</strong></p>.<p>ಕಡಲು ಪ್ರಕ್ಷುಬ್ಧಗೊಂಡಿದ್ದು ಅಲೆಗಳ ಉಬ್ಬರಕ್ಕೆ ಪಡುಬಿದ್ರಿ, ಪಡುಕೆರೆ, ಬೈಂದೂರು, ಮಲ್ಪೆಯಲ್ಲಿ ಕಡಲ್ಕೊರೆತ ಉಂಟಾಗಿದ್ದು 2,115 ಮೀಟರ್ ಕಡಲ್ಕೊರೆತ ಉಂಟಾಗಿದೆ. ಅಂದಾಜು ₹ 18.95 ಕೋಟಿ ನಷ್ಟ ಅಂದಾಜಿಸಲಾಗಿದೆ.</p>.<p><strong>5 ಸಾವು:</strong></p>.<p>ಈ ವರ್ಷ ಸುರಿದ ಮಳೆಗೆ ಜಿಲ್ಲೆಯಲ್ಲಿ 5 ಮಂದಿ ಮೃತಪಟ್ಟಿದ್ದು, ತಲಾ ₹ 5 ಲಕ್ಷದಂತೆ ₹ 15 ಲಕ್ಷ ಪರಿಹಾರ ನೀಡಲಾಗಿದೆ. 6 ಜಾನುವಾರು, 168 ಮನೆಗಳಿಗೆ ಭಾಗಶಃ, 2 ಮನೆಗಳಿಗೆ ಪೂರ್ಣ ಹಾನಿ, 8 ದನದ ಕೊಟ್ಟಿಗೆಗಳು ಮಳೆಗೆ ಬಿದ್ದಿವೆ. ಒಟ್ಟು ₹ 67.39 ಲಕ್ಷ ನಷ್ಟ ಅಂದಾಜಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>