ಕಳೆದ ಕೆಲವು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ಹಲವು ಕಡೆಗಳಲ್ಲಿ ನೇಜಿಗೆ ಬಿತ್ತಿದ್ದ ಬೀಜ ಕೊಳೆದು ನಾಶವಾಗಿದೆ. ಹೀಗಾಗಿ ಈ ಬಾರಿ ಸಾಕಷ್ಟು ಪ್ರಮಾಣದಲ್ಲಿ ನೇಜಿ ಕೊರತೆ ಎದುರಾಗುವ ಲಕ್ಷಣವಿದೆ. ಇದಕ್ಕಾಗಿ ಕೆಲವು ರೈತರು ನಾಟಿ ಮಾಡುವುದನ್ನೇ ಕೈಬಿಟ್ಟು ಬಿತ್ತನೆಯಲ್ಲಿ ತೊಡಗಿದ್ದಾರೆ. ಈ ಬಾರಿ ಮುಂಗಾರು ಹಂಗಾಮಿಗೆ ಕರಾವಳಿಯ ಸಾಂಪ್ರದಾಯಿಕ ತಳಿ ಎಂ.ಒ.೪. ಬೀಜದ ಕೊರತೆಯಾದ ಕಾರಣ ಹಲವು ಮಂದಿ ಪ್ರಯೋಗದ ರೀತಿಯಲ್ಲಿ ಉಮಾ, ಜ್ಯೋತಿ, ಜಯ, ಎನ್.13 ಮುಂತಾದ ತಳಿ ಉಪಯೋಗಿಸಿ ನೇಜಿ ತಯಾರಿಸಿದ್ದು ಈ ತಳಿಗಳು ಯಾವ ರೀತಿ ಫಸಲು ನೀಡಬಹುದು ಎನ್ನುವ ನಿರೀಕ್ಷೆ ಕೂಡ ರೈತರಲ್ಲಿದೆ.