<p><strong>ಬ್ರಹ್ಮಾವರ: </strong>ಬ್ರಹ್ಮಾವರ ಪರಿಸರದ ಕೆಲವೆಡೆ ಶುಕ್ರವಾರ ಸಂಜೆ ಉತ್ತಮ ಮಳೆ ಸುರಿಯಿತು. ನಗರದಲ್ಲಿ ಶುಕ್ರವಾರ ಸಂಜೆ ಸುರಿದ ಮಳೆಗೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ ಗೋಡೆ ಕುಸಿದು ನಷ್ಟ ಉಂಟಾಗಿದೆ.</p>.<p>ಮೈದಾನದಲ್ಲಿ ನೀರು ಶೇಖರಣೆಯಾಗಿ ಈ ಆವರಣ ಕುಸಿದಿದೆ. ಕಳಪೆ ಕಾಮಗಾರಿಯಿಂದ ಸತತ ಮೂರನೇ ಬಾರಿ ಈ ಗೋಡೆ ಕುಸಿದಿದೆ ಎಂದು ಸ್ಥಳೀಯರು ದೂರಿದ್ದಾರೆ.</p>.<p class="Subhead">ಅಪಾಯ: ಶಾಲೆಯ ಮೈದಾನದಲ್ಲಿಯೇ ತೆರೆದ ಬಾವಿ ಇದ್ದು, ಮಳೆಗಾಲದಲ್ಲಿ ಕುಸಿಯುವ ಭೀತಿ ಇದೆ, ಶಾಲಾ ವಿದ್ಯಾರ್ಥಿಗಳು ಇಲ್ಲೇ ಆಟವಾಡುವುದರಿಂದ ಮಳೆಗಾಲದೊಳಗೆ ಬಾವಿಯ ಸುತ್ತ ಕಾಂಪೌಂಡ್ ನಿರ್ಮಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<p>ರಭಸದ ಗಾಳಿಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಿತ್ತು. ಚಾಂತಾರು, ಆರೂರು, ಹೇರೂರು ಪರಿಸರದಲ್ಲಿಯೂ ಉತ್ತಮವಾಗಿ ಮಳೆಯಾಯಿತು.</p>.<p class="Briefhead"><strong>ಮಳೆ ಬಿರುಸು</strong></p>.<p><strong>ಉಡುಪಿ: </strong>ಉಡುಪಿಯಲ್ಲಿ ಶುಕ್ರವಾರ ಗುಡುಗು ಸಿಡಿಲು ಸಹಿತ ಬಿರುಸಿನ ಮಳೆ ಸುರಿಯಿತು. ಸಂಜೆ ಸುರಿದ ಭಾರಿ ಮಳೆಗೆ ಹಲವೆಡೆ ಸಂಚಾರ ಅಸ್ತವ್ಯಸ್ತವಾಗಿತ್ತು. ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ರಹ್ಮಾವರ: </strong>ಬ್ರಹ್ಮಾವರ ಪರಿಸರದ ಕೆಲವೆಡೆ ಶುಕ್ರವಾರ ಸಂಜೆ ಉತ್ತಮ ಮಳೆ ಸುರಿಯಿತು. ನಗರದಲ್ಲಿ ಶುಕ್ರವಾರ ಸಂಜೆ ಸುರಿದ ಮಳೆಗೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ ಗೋಡೆ ಕುಸಿದು ನಷ್ಟ ಉಂಟಾಗಿದೆ.</p>.<p>ಮೈದಾನದಲ್ಲಿ ನೀರು ಶೇಖರಣೆಯಾಗಿ ಈ ಆವರಣ ಕುಸಿದಿದೆ. ಕಳಪೆ ಕಾಮಗಾರಿಯಿಂದ ಸತತ ಮೂರನೇ ಬಾರಿ ಈ ಗೋಡೆ ಕುಸಿದಿದೆ ಎಂದು ಸ್ಥಳೀಯರು ದೂರಿದ್ದಾರೆ.</p>.<p class="Subhead">ಅಪಾಯ: ಶಾಲೆಯ ಮೈದಾನದಲ್ಲಿಯೇ ತೆರೆದ ಬಾವಿ ಇದ್ದು, ಮಳೆಗಾಲದಲ್ಲಿ ಕುಸಿಯುವ ಭೀತಿ ಇದೆ, ಶಾಲಾ ವಿದ್ಯಾರ್ಥಿಗಳು ಇಲ್ಲೇ ಆಟವಾಡುವುದರಿಂದ ಮಳೆಗಾಲದೊಳಗೆ ಬಾವಿಯ ಸುತ್ತ ಕಾಂಪೌಂಡ್ ನಿರ್ಮಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<p>ರಭಸದ ಗಾಳಿಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಿತ್ತು. ಚಾಂತಾರು, ಆರೂರು, ಹೇರೂರು ಪರಿಸರದಲ್ಲಿಯೂ ಉತ್ತಮವಾಗಿ ಮಳೆಯಾಯಿತು.</p>.<p class="Briefhead"><strong>ಮಳೆ ಬಿರುಸು</strong></p>.<p><strong>ಉಡುಪಿ: </strong>ಉಡುಪಿಯಲ್ಲಿ ಶುಕ್ರವಾರ ಗುಡುಗು ಸಿಡಿಲು ಸಹಿತ ಬಿರುಸಿನ ಮಳೆ ಸುರಿಯಿತು. ಸಂಜೆ ಸುರಿದ ಭಾರಿ ಮಳೆಗೆ ಹಲವೆಡೆ ಸಂಚಾರ ಅಸ್ತವ್ಯಸ್ತವಾಗಿತ್ತು. ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>