ಈ ಬಾರಿ ಮುಂಗಾರು ಪೂರ್ವದಲ್ಲಿ ಉತ್ತಮ ಮಳೆಯಾಗಿ, ಭತ್ತದ ಬೆಳೆಗೆ ಪೂರಕ ವಾತಾವರಣ ಸೃಷ್ಟಿಯಾಗಿ ಕೃಷಿಕರು ನಾಟಿ ಕಾರ್ಯಕ್ಕೆ ಸಿದ್ಧತೆ ಬೇಗ ಮಾಡಿಕೊಳ್ಳಲು ಸಾಧ್ಯವಾಗಿತ್ತು. ರೈತರು ಮೇ ತಿಂಗಳಿನಲ್ಲಿಯೇ ಗದ್ದೆ ಉಳುಮೆ ಮಾಡಿ ಬೀಜ ಬಿತ್ತನೆ ಮಾಡಿ ಸಸಿಗಳನ್ನು ತಯಾರಿಸಿದ್ದರು.ಇದೀಗ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿರುವುದರಿಂದ ಕೋಟ ಹೋಬಳಿಯ ಬಹುತೇಕ ಕಡೆ ನಾಟಿ ಕಾರ್ಯ ಬಿರುಸಿನಿಂದ ನಡೆಯುತ್ತಿದೆ.