ಉಡುಪಿ: ಜಿಲ್ಲೆಯ ಹಲವೆಡೆ ಭಾನುವಾರ ಸಂಜೆ ಬಿರುಸಾಗಿ ಮಳೆ ಸುರಿಯಿತು. ಕುಂದಾಪುರ, ಬೈಂದೂರು, ಬ್ರಹ್ಮಾವರ ಸೇರಿದಂತೆ ಹಲವೆಡೆಗಳಲ್ಲಿ ಉತ್ತಮ ಮಳೆಯಾಗಿದೆ.
ರಾಜ್ಯದ ಕರಾವಳಿಯಲ್ಲಿ ಮೂರು ದಿನ ಭಾರಿ ಮಳೆ ಸುರಿಯಲಿದ್ದು, ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಂಟೆಗೆ 40 ರಿಂದ 50 ಕಿ,ಮೀ ವೇಗದಲ್ಲ ಬಿರುಗಾಳಿ ಬೀಸಲಿದೆ ಎಂದೂ ಎಚ್ಚರಿಕೆ ನೀಡಿದೆ.