ಶುಕ್ರವಾರ ಮಧ್ಯರಾತ್ರಿ ಬಿರುಸುಗೊಂಡ ಮಳೆಯು ನಿರಂತರವಾಗಿ ಸುರಿದು ಜನಜೀವನ ಅಸ್ತವ್ಯಸ್ತಗೊಳಿಸಿತು. ಶನಿವಾರ ಇಡೀದಿನ ಕಾರ್ಮೋಡ ಕವಿದು ಜಿಟಿಜಿಟಿ ಮಳೆ ಸುರಿಯುತ್ತಲೇ ಇತ್ತು. ಪರಿಣಾಮ ಬನ್ನಂಜೆ, ಮೂಡನಿಡಂಬೂರು, ಮಠದ ಬೆಟ್ಟು, ಕೃಷ್ಣಮಠದ ಪಾರ್ಕಿಂಗ್ ಪ್ರದೇಶ, ಬೈಲಕೆರೆ ಪ್ರದೇಶ ಭಾಗಶಃ ಜಲಾವೃತಗೊಂಡು ನಿವಾಸಿಗಳು ಸಂಕಷ್ಟ ಎದುರಿಸಬೇಕಾಯಿತು.