ಸೋಮವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಶಾಸಕರು, ‘ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ರಕ್ಷಾ ಮೃತಪಟ್ಟಿದ್ದಾರೆ. ರಕ್ಷಾ ಅವರ ಕೋವಿಡ್ ಪರೀಕ್ಷಾ ವರದಿಯಲ್ಲೂ ದಿನಾಂಕ ವ್ಯತ್ಯಾಸವಾಗಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ ಎಂದುಸಂಬಂಧಿಗಳು ದೂರಿದ್ದಾರೆ. ಈ ವಿಚಾರಗಳನ್ನು ಸೋಮವಾರ ಎಸ್ಪಿ ಕಚೇರಿಯಲ್ಲಿ ಗೃಹ ಸಚಿವರ ಜತೆಗೆ ನಡೆದ ವಿಡಿಯೋ ಕಾನ್ಫರೆನ್ಸ್ನಲ್ಲಿ ಚರ್ಚಿಸಲಾಗಿದ್ದು, ಸಚಿವರು ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದಾರೆ’ ಎಂದು ತಿಳಿಸಿದರು.