ಉಡುಪಿ: ರಾಮಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಮತ್ತೊಂದು ಗೋದ್ರಾ ದುರಂತ ನಡೆಯಬಹುದು ಎಂಬ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿಕೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಒತ್ತಾಯಿಸಿದರು.
ಅನುಭವಿ ರಾಜಕಾರಣಿ ಹರಿಪ್ರಸಾದ್ ಮಾತಿನಂತೆ ಗೋದ್ರಾ ದುರಂತ ಮರುಕಳಿಸಿದರೆ ಶ್ರೀರಾಮ ಮಂದಿರ ನಿರ್ಮಾಣವನ್ನು ಹಿಂದಿನಿಂದಲೂ ವಿರೋಧಿಸುತ್ತಾ ಬಂದಿರುವ ಕಾಂಗ್ರೆಸ್ ನೇರ ಕಾರಣವಾಗಲಿದೆ ಎಂದು ಕೋಟ ಹೇಳಿದರು.
ರಾಮಮಂದಿರ ನಿರ್ಮಾಣಕ್ಕೆ ಸರ್ಕಾರದ ಹಣ ಬಳಕೆಯಾಗಿಲ್ಲ, ನೇರ ಹಸ್ತಕ್ಷೇಪವೂ ಇಲ್ಲ. ಭಕ್ತರ ದೇಣಿಗೆಯಿಂದ ತಲೆ ಎತ್ತಿರುವ ರಾಮಮಂದಿರ ಸಮಸ್ತ ಹಿಂದೂಗಳ ಮಂದಿರವಾಗಿದೆ. ಕೆಲವರು ರಾಜಕೀಯ ಕಾರಣಕ್ಕೆ ಬಿಜೆಪಿ ರಾಮಮಮಂದಿರ ಎಂದು ಟೀಕಿಸುತ್ತಿದ್ದಾರೆ ಎಂದರು.