ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಮಂದಿರ ಶತಮಾನಗಳ ಕನಸು:ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Last Updated 3 ಆಗಸ್ಟ್ 2020, 16:01 IST
ಅಕ್ಷರ ಗಾತ್ರ

ಉಡುಪಿ: ರಾಮಾಯಣ, ಮಹಾಭಾರತ ಎರಡು ಸಾಹಿತ್ಯಗಳು ದೇಶದ ಸಂಸ್ಕೃತಿಯ ಮೂಲಬೇರುಗಳು. ಉದಾತ್ತವಾದ ಸನಾತನ ಸಂಸ್ಕೃತಿಯ ಕಾರಣಕ್ಕೆ ಜಗತ್ತಿನಲ್ಲಿ ಭಾರತಕ್ಕೆ ವಿಶೇಷ ಸ್ಥಾನವಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಹೇಳಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ಕುರಿತು ಮಾತನಾಡಿದ ಶ್ರೀಗಳು ‘ಆದರ್ಶ ಪುರುಷ ಶ್ರೀರಾಮನಅವತಾರ ಭೂಮಿಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗುತ್ತಿರುವುದು ಶತಮಾನಗಳ ಕನಸು. ಅಸಂಖ್ಯ ಹಿಂದೂಗಳ ಹೋರಾಟ ಬಲಿದಾನವೂ ರಾಮಮಂದಿರ ನಿರ್ಮಾಣದ ಹಿಂದಿದೆ’ ಎಂದಿದ್ದಾರೆ.

ಅಯೋಧ್ಯೆ ರಾಮಮಂದಿರನಿರ್ಮಾಣ ಕಾರ್ಯದಲ್ಲಿ ಎಲ್ಲರೂ ಕಾಯ ವಾಚ ಮನಸ ತೊಡಗಿಸಿಕೊಳ್ಳೋಣ ಎಂದು ಶ್ರೀಗಳು ಕರೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT