ಶನಿವಾರ ಮಠದಲ್ಲಿ ರಾಮನವಮಿಯ ಅಂಗವಾಗಿ ದೇವರಿಗೆ ಪಂಚಾಮೃತ ಮಹಾಭಿಷೇಕ ಸಹಿತ ಮಹಾಪೂಜೆ, ಮನ್ಯುಸೂಕ್ತ ಹೋಮ, ಪಲ್ಲ ಪೂಜೆ,ಮಹಾ ಅನ್ನಸಂತರ್ಪಣೆ ನಡೆಯಿತು. ಸಂಜೆ ಮುಖ್ಯಪ್ರಾಣ ದೇವರಿಗೆ ವಿಶೇಷ ರಂಗ ಪೂಜೆ, ಭೂತರಾಜರ ಪೂಜೆ, ರಥೋತ್ಸವ, ಓಲಗ ಮಂಟಪ ಪೂಜೆ, ಅಷ್ಟಾವಧಾನ ಸೇವೆ ನಡೆಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬಡಗುತಿಟ್ಟಿನ ಖ್ಯಾತ ಕಲಾವಿದರ ಕೂಡುವಿಕೆಯಲ್ಲಿ 'ಸುಭದ್ರಾ ಕಲ್ಯಾಣ' ಎಂಬ ಯಕ್ಷಗಾನ ಪ್ರದರ್ಶನ ನಡೆಯಿತು.ಭಾನುವಾರ ಬೆಳಿಗ್ಗೆ ಹಗಲು ರಥೋತ್ಸವ, ಅವಭೃತೋತ್ಸವ ನಡೆಯಿತು.