ವಿಷ್ಣು ಸ್ಮಾರಕ ವಿಚಾರ ಕುರಿತು ಪ್ರತಿಕ್ರಿಯಿಸಿದಅವರು, ‘ಎಲ್ಲಿ ವಿಷ್ಣುವರ್ಧನ್ ಸ್ಮಾರಕ ಮಾಡಲು ಹೋದರೂ ಅಲ್ಲಿ ವಿವಾದ ಎದುರಾಗುತ್ತಿದೆ. ವಿಷ್ಣುವರ್ಧನ್ ನಿಧನರಾಗಿ 9 ವರ್ಷ ಕಳೆದರೂ ಸ್ಮಾರಕ ಆಗದಿರುವ ಬಗ್ಗೆ ನೋವಿದೆ. ಅವರು ಹುಟ್ಟಿ ಬೆಳೆದ ಹಾಗೂ ಕೊನೆಯುಸಿರೆಳೆದ ಮೈಸೂರಿನಲ್ಲಿಯೇ ಸ್ಮಾರಕ ನಿರ್ಮಿಸುವಂತೆ ಭಾರತಿ ವಿಷ್ಣುವರ್ಧನ್ ಮನವಿ ಮಾಡಿದ್ದಾರೆ. ವಿಷ್ಣು ಆಸೆ ಅವರ ಕುಟುಂಬಕ್ಕೆ ಗೊತ್ತಿದೆ. ನಾವು ಅವರ ಮಾತಿಗೆ ಗೌರವ ಕೊಡಬೇಕಾಗಿದೆ’ ಎಂದರು.