ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲು ನಿಲ್ದಾಣದಲ್ಲಿ ವ್ಯಾನಿಟಿ ಬ್ಯಾಗ್ ಕಿತ್ತು ಪರಾರಿ

Last Updated 3 ಜುಲೈ 2022, 15:37 IST
ಅಕ್ಷರ ಗಾತ್ರ

ಉಡುಪಿ: ಉಡುಪಿ ರೈಲು ನಿಲ್ದಾಣದಲ್ಲಿ ಈಚೆಗೆ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ಮಹಿಳೆಯ ವ್ಯಾನಿಟಿ ಬ್ಯಾಗ್ ಅನ್ನು ಕಳ್ಳನೊಬ್ಬ ಕಿತ್ತುಕೊಂಡು ಪರಾರಿಯಾಗಿದ್ದಾನೆ.

ಗುಜರಾತ್ ರಾಜ್ಯದ ಸ್ನೇಹ ಎಂಬುವರು ಮೇ 9ರಂದು ಕುಟುಂಬ ಸದಸ್ಯರೊಂದಿಗೆ ಮಂಗಳೂರಿಗೆ ತೆರಳುತ್ತಿದ್ದರು. ರೈಲು ಉಡುಪಿ ರೈಲು ನಿಲ್ದಾಣದಲ್ಲಿ ನಿಂತಾಗ ಪತಿಯೊಂದಿಗೆ ಮೊಬೈಲ್‌ನಲ್ಲಿ ಮಾತನಾಡುವ ಸಂದರ್ಭ ಕಳ್ಳ ಏಕಾಏಕಿ ಸ್ನೇಹಾ ಅವರ ವ್ಯಾನಿಟಿ ಬ್ಯಾಗ್ ಕಿತ್ತುಕೊಂಡು ಪರಾರಿಯಾಗಿದ್ದಾನೆ.

ವ್ಯಾನಿಟಿ ಬ್ಯಾಗ್‌ನಲ್ಲಿ ₹25,000 ಬೆಲೆಯ ಚಿನ್ನದ ರಿಂಗ್‌, ₹20,000 ಬೆಲೆಯ ಚಿನ್ನದ ಕಿವಿ ಓಲೆ ಹಾಗೂ ₹ 8000 ನಗದು ಇತ್ತು ಎಂದು ಸ್ನೇಹಾ ಮಂಗಳೂರು ರೈಲ್ವೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಘಟನಾ ಸ್ಥಳದ ಆಧಾರದ ಮೇಲೆ ಉಡುಪಿ ನಗರ ಠಾಣೆಗೆ ಪ್ರಕರಣ ವರ್ಗಾವಣೆಯಾಗಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT