ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಐವರು ಸಾಧಕರಿಗೆ ಮಲಬಾರ್ ವಿಶ್ವರಂಗ ಪುರಸ್ಕಾರ

Last Updated 11 ಮಾರ್ಚ್ 2021, 16:25 IST
ಅಕ್ಷರ ಗಾತ್ರ

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ. ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯ ಆಶ್ರಯದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ‘ಮಲಬಾರ್ ವಿಶ್ವರಂಗ ಪುರಸ್ಕಾರ-2021’ ನೀಡಲಾಗುತ್ತಿದ್ದು, ರಾಜ್ಯ ಹಾಗೂ ಹೊರ ರಾಜ್ಯಗಳ ಐವರು ಹಿರಿಯ ಕನ್ನಡ ರಂಗಕರ್ಮಿಗಳನ್ನು ಆಯ್ಕೆ ಮಾಡಲಾಗಿದೆ.

ಉಡುಪಿಯ ನಟ, ಸಂಘಟಕ ಎನ್.ರಾಜಗೋಪಾಲ್ ಬಲ್ಲಾಳ್, ಮಂಗಳೂರಿನ ನಟ ಲಕ್ಷ್ಮಣ್ ಕುಮಾರ್ ಮಲ್ಲೂರು, ಮುಂಬಯಿ ಕನ್ನಡ ರಂಗಭೂಮಿಯ ನಟಿ ಅಹಲ್ಯಾ ಬಲ್ಲಾಳ್, ಧಾರವಾಡದ ನಟಿ ಶಶಿಕಲಾ ಜೋಶಿ, ನಾಟಕಕಾರ ಉಡುಪಿಯ ಗಂಗಾಧರ ಕಿದಿಯೂರು ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮಾರ್ಚ್ 26ರಂದು ವಿಶ್ವ ರಂಗಭೂಮಿ ದಿನಾಚರಣೆಯಲ್ಲಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್‌ನ ಉಡುಪಿ ಶಾಖೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಸಮಿತಿ ಸಂಚಾಲಕರಾದ ರಾಜೇಶ್ ಭಟ್ ಪಣಿಯಾಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT