ಡಾ. ರತ್ನಾಕರಸಿ. ಕುನುಗೋಡು ಅವರು ಶಿವಮೊಗ್ಗಜಿಲ್ಲೆ ಶಿಕಾರಿಪುರ ತಾಲ್ಲೂಕು ಎರೆಕೊಪ್ಪದವರು. ತಾಯಿ ಶ್ರೀಮತಿ ನಿಂಗಮ್ಮ, ತಂದೆ ಶ್ರೀಚನ್ನಬಸಪ್ಪ. ಪ್ರಾಥಮಿಕ ಶಾಲಾಶಿಕ್ಷಕರಾಗಿ, ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಪ್ರಸ್ತುತ ಕನ್ನಡ ಸಹಾಯಕ ಪ್ರಾಧ್ಯಾಪಕರಾಗಿ ಸ.ಪ್ರ.ದ. ಕಾಲೇಜು, ರಿಪ್ಪನ್ಪೇಟೆ ಶಿವಮೊಗ್ಗ ಜಿಲ್ಲೆ ಇಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಶ್ರೀಯುತರು ಸಾಹಿತ್ಯ, ರಂಗಭೂಮಿ, ಸಂಘಟನೆ, ಸಾಮಾಜಿಕ ಪರಿವರ್ತನೆಗಳತ್ತ ಒಲವು ಮೂಡಿಸಿಕೊಂಡು ಕ್ರಿಯಾಶೀಲರಾಗಿದ್ದಾರೆ. ಕವಿತೆಗಳು ಮತ್ತು ಸಂಶೋಧನಾ ಲೇಖನಗಳ ಬರೆಹಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.