<p><strong>ಕಾಪು (ಪಡುಬಿದ್ರಿ):</strong> ಮಲ್ಲಾರು-ಮಜೂರು ಬದ್ರಿಯಾ ಜುಮ್ಮಾ ಮಸೀದಿ ಆಶ್ರಯದಲ್ಲಿ ಆ.23ರಂದು ನಡೆಯುವ ಮರ್ಹಬಾ ಯಾ ಶದ್ರ್ ರಬೀದ್ ಮತ್ತು ಸ್ವಲಾತ್ ವಾರ್ಷಿಕ ಕಾರ್ಯಕ್ರಮದ ಪ್ರಯುಕ್ತ ಹಾಫಿಳ್ ಸಿರಾಜುದ್ದೀನ್ ಖಾಸಿಮಿ ಪತ್ತನಾಪುರಂ ಅವರಿಂದ ಧಾರ್ಮಿಕ ಪ್ರಭಾಷಣ ನಡೆಯಲಿದೆ.</p>.<p>ಮಸೀದಿ ಸಮಿತಿಯ ಅಧ್ಯಕ್ಷ ಎಂ.ಫಾರೂಕ್ ಉಮ್ಮರಬ್ಬ ಚಂದ್ರನಗರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.</p>.<p>ಅಸ್ಸಯ್ಯದ್ ಅಬ್ದರ್ರಹ್ಮಾನ್ ಬಾಅಲವಿ ಸಾದಾತ್ ತಂಙಳ್ ಗುರುವಾಯನಕೆರೆ ಸ್ವಲಾತ್ ನೇತೃತ್ವ ವಹಿಸಲಿದ್ದಾರೆ. ಮಸೀದಿಯ ಖತೀಬ್ ಎಂ.ಕೆ. ಅಬ್ರಶೀದ್ ಸಖಾಫಿ ಅಲ್ಕಾಮಿಲ್ ಉದ್ಘಾಟಿಸಲಿದ್ದಾರೆ. <br /> ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್, ಸಚಿವ ಜಮೀರ್ ಅಹ್ಮದ್ ಖಾನ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್, ಐವನ್ ಡಿಸೋಜ ಹಾಗೂ ರಾಜಕೀಯ, ಧಾರ್ಮಿಕ, ಸಾಮಾಜಿಕ ಮುಖಂಡರು ಭಾಗವಹಿಸಲಿದ್ದಾರೆ ಎಂದರು.</p>.<p>ಗುಡ್ಡೆ ಮಸೀದಿ ಎಂದು ಕರೆಯುತ್ತಿದ್ದ 120 ವರ್ಷಗಳ ಇತಿಹಾಸವಿರುವ ಬದ್ರಿಯಾ ಜುಮ್ಮಾ ಮಸೀದಿ ಅಧೀನದಲ್ಲಿ 400ಕ್ಕೂ ಅಧಿಕ ಕುಟುಂಬಗಳು ಇವೆ. ಆರು ವರ್ಷಗಳ ಹಿಂದೆ ಇಂಡೊ ಶೈಲಿಯಲ್ಲಿ ಮರದ ಕೆತ್ತನೆ ಮಾಡಿ ಮಸೀದಿಯ ಜೀರ್ಣೋದ್ಧಾರ ಕಾರ್ಯ ನಡೆಸಲಾಗಿದೆ. ದಾನಿಗಳ ನೆರವಿನಿಂದ ₹70 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದರು.</p>.<p>ಪ್ರಮುಖರಾದ ಶರ್ಫುದ್ದೀನ್ ಶೇಖ್, ಅಶ್ರಫ್ ಮಜೂರು, ಪಿ.ಎಂ. ಇಬ್ರಾಹಿಂ ಮಜೂರು, ರಝಾಕ್ ಚಂದ್ರನಗರ ಕೊಪ್ಪ, ಅಶ್ರಫ್ ಕರಂದಾಡಿ, ಹಸನಬ್ಬ ಗುಡ್ಡಕೇರಿ ಇದ್ದರು. <br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಪು (ಪಡುಬಿದ್ರಿ):</strong> ಮಲ್ಲಾರು-ಮಜೂರು ಬದ್ರಿಯಾ ಜುಮ್ಮಾ ಮಸೀದಿ ಆಶ್ರಯದಲ್ಲಿ ಆ.23ರಂದು ನಡೆಯುವ ಮರ್ಹಬಾ ಯಾ ಶದ್ರ್ ರಬೀದ್ ಮತ್ತು ಸ್ವಲಾತ್ ವಾರ್ಷಿಕ ಕಾರ್ಯಕ್ರಮದ ಪ್ರಯುಕ್ತ ಹಾಫಿಳ್ ಸಿರಾಜುದ್ದೀನ್ ಖಾಸಿಮಿ ಪತ್ತನಾಪುರಂ ಅವರಿಂದ ಧಾರ್ಮಿಕ ಪ್ರಭಾಷಣ ನಡೆಯಲಿದೆ.</p>.<p>ಮಸೀದಿ ಸಮಿತಿಯ ಅಧ್ಯಕ್ಷ ಎಂ.ಫಾರೂಕ್ ಉಮ್ಮರಬ್ಬ ಚಂದ್ರನಗರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.</p>.<p>ಅಸ್ಸಯ್ಯದ್ ಅಬ್ದರ್ರಹ್ಮಾನ್ ಬಾಅಲವಿ ಸಾದಾತ್ ತಂಙಳ್ ಗುರುವಾಯನಕೆರೆ ಸ್ವಲಾತ್ ನೇತೃತ್ವ ವಹಿಸಲಿದ್ದಾರೆ. ಮಸೀದಿಯ ಖತೀಬ್ ಎಂ.ಕೆ. ಅಬ್ರಶೀದ್ ಸಖಾಫಿ ಅಲ್ಕಾಮಿಲ್ ಉದ್ಘಾಟಿಸಲಿದ್ದಾರೆ. <br /> ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್, ಸಚಿವ ಜಮೀರ್ ಅಹ್ಮದ್ ಖಾನ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್, ಐವನ್ ಡಿಸೋಜ ಹಾಗೂ ರಾಜಕೀಯ, ಧಾರ್ಮಿಕ, ಸಾಮಾಜಿಕ ಮುಖಂಡರು ಭಾಗವಹಿಸಲಿದ್ದಾರೆ ಎಂದರು.</p>.<p>ಗುಡ್ಡೆ ಮಸೀದಿ ಎಂದು ಕರೆಯುತ್ತಿದ್ದ 120 ವರ್ಷಗಳ ಇತಿಹಾಸವಿರುವ ಬದ್ರಿಯಾ ಜುಮ್ಮಾ ಮಸೀದಿ ಅಧೀನದಲ್ಲಿ 400ಕ್ಕೂ ಅಧಿಕ ಕುಟುಂಬಗಳು ಇವೆ. ಆರು ವರ್ಷಗಳ ಹಿಂದೆ ಇಂಡೊ ಶೈಲಿಯಲ್ಲಿ ಮರದ ಕೆತ್ತನೆ ಮಾಡಿ ಮಸೀದಿಯ ಜೀರ್ಣೋದ್ಧಾರ ಕಾರ್ಯ ನಡೆಸಲಾಗಿದೆ. ದಾನಿಗಳ ನೆರವಿನಿಂದ ₹70 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದರು.</p>.<p>ಪ್ರಮುಖರಾದ ಶರ್ಫುದ್ದೀನ್ ಶೇಖ್, ಅಶ್ರಫ್ ಮಜೂರು, ಪಿ.ಎಂ. ಇಬ್ರಾಹಿಂ ಮಜೂರು, ರಝಾಕ್ ಚಂದ್ರನಗರ ಕೊಪ್ಪ, ಅಶ್ರಫ್ ಕರಂದಾಡಿ, ಹಸನಬ್ಬ ಗುಡ್ಡಕೇರಿ ಇದ್ದರು. <br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>