ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣಕ್ಕಾಗಿ ಧಾರ್ಮಿಕ ಅನುಷ್ಠಾನ ಸಂಕಲ್ಪ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ವಿಶ್ವ ಹಿಂದೂ ಪರಿಷತ್ ಕ್ಷೇತ್ರ ಸಂಘಟನಾ ಕಾರ್ಯದರ್ಶಿ ಕೇಶವ ಭಾಗವಹಿಸಲಿದ್ದಾರೆ. ಸಾಧು, ಸಂತರು, ಧಾರ್ಮಿಕ ಮುಖಂಡರು ಸೇರಿದಂತೆ ಜಿಲ್ಲೆಯ ರಾಮ ಭಕ್ತರು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.