<p><strong>ಕಾರ್ಕಳ:</strong> ತಾಲ್ಲೂಕಿನ ರೆಂಜಾಳದ ಭಗವಾನ್ 1008 ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಇದೇ 6ರಿಂದ 8ರ ತನಕ ಧಾಮ ಸಂಪ್ರೋಕ್ಷಣಾ ಪೂರ್ವಕ ಜಿನಬಿಂಬಗಳ ಪುನಃ ಪ್ರತಿಷ್ಠಾ ಮಹೋತ್ಸವ ನಡೆಯಲಿದೆ.</p>.<p>ಕಾರ್ಕಳ ದಾನಶಾಲಾ ಜೈನಮಠದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ನೇತೃತ್ವ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ಈ ಮಹೋತ್ಸವ ನಡೆಯಲಿದೆ.</p>.<p>6ರಂದು ಬೆಳಿಗ್ಗೆ ಧಾರ್ಮಿಕ ಕಾರ್ಯಕ್ರಮಗಳು, ಸಂಜೆ 6ಕ್ಕೆ ನಡೆಯುವ ಧಾರ್ಮಿಕ ಸಭೆಯಲ್ಲಿ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮುಖಂಡ ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸುವರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ ಶೈಲಿಯಲ್ಲಿ ‘ಜಿನಗಂಧೋದಕ ಮಹಿಮೆ’ ಎಂಬ ಕಾವ್ಯ– ವಾಚನ- ಪ್ರವಚನ ವೈಭವ ನಡೆಯಲಿದೆ. ಕಾವ್ಯಶ್ರೀ ಅಜೇರು ಹಾಡುಗಾರಿಕೆಯಲ್ಲಿ ಮುನಿರಾಜ ರೆಂಜಾಳ ಮತ್ತು ತಂಡದವರು ನಡೆಸಿಕೊಡುವರು. </p>.<p>7ರಂದು ಬೆಳಿಗ್ಗೆ ಧಾರ್ಮಿಕ ಕಾರ್ಯಕ್ರಮ, ಮಧ್ಯಾಹ್ನ 3 ರಿಂದ ಪುರ ಮೆರವಣಿಗೆ, ಸಂಜೆ ರೆಂಜಾಳದ ಜೈನ ಬಾಂಧವರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ 6ಕ್ಕೆ ಧಾರ್ಮಿಕ ಸಭೆ ನಡೆಯಲಿದೆ. ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮೂಡುಬಿದಿರೆ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡುವರು. ಪ್ರತಿಮಾಧಾರಿ ಶ್ರಾವಕಿ ಜಯಮಾಲಾ ಎನ್. ಉಜಿರೆ ಅಧ್ಯಕ್ಷತೆ ವಹಿಸುವರು. ಶಾಸಕ ವಿ. ಸುನಿಲ್ ಕುಮಾರ್ ಉಪಸ್ಥಿತರಿರುವರು.</p>.<p>8ರಂದು ಬೆಳಿಗ್ಗೆ ಧಾರ್ಮಿಕ ವಿಧಿಗಳು, 11.20ರಿಂದ 11.28ರ ವೃಷಭ ಲಗ್ನದಲ್ಲಿ ಭಗವಾನ್ 1008 ನೇಮಿನಾಥ ಸ್ವಾಮಿಗೆ 108 ಕಲಶಗಳ ಮಹಾಭಿಷೇಕ, 12ರಿಂದ 12.25ರ ಅವಧಿಯಲ್ಲಿ ಭಗವಾನ್ 1008 ಚಂದ್ರನಾಥ ಸ್ವಾಮಿಯ ಪ್ರತಿಷ್ಠೆ, 216 ಕಲಶಗಳ ಮಹಾಭಿಷೇಕ, ಮಹಾಮಂಗಳಾರತಿ ನಡೆಯಲಿದೆ. ಸಂಜೆ 6 ಗಂಟೆಗೆ ನಡೆಯುವ ಧಾರ್ಮಿಕ ಸಭೆಯಲ್ಲಿ ನರಸಿಂಹರಾಜಪುರ ಅತಿಶಯ ಕ್ಷೇತ್ರ ಸಿಂಹನಗದ್ದೆಯ ಲಕ್ಷ್ಮೀಸೇನ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡುವರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವಿರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸುವರು.</p>.<p>ನಂತರ ಕಾರ್ಕಳ ಲಲಿತಕೀರ್ತಿ ಯಕ್ಷಗಾನ ಕಲಾಮಂಡಳಿ ಸದಸ್ಯರಿಂದ ‘ಕಮಠೋಪಸರ್ಗ ವಿಜಯಿ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಬಸದಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮಹಾವೀರ ಹೆಗ್ಡೆ ರೆಂಜಾಳ ಮತ್ತು ಆಡಳಿತ ಮೊಕ್ತೇಸರ ಪಾರ್ಶ್ವನಾಥ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಕಳ:</strong> ತಾಲ್ಲೂಕಿನ ರೆಂಜಾಳದ ಭಗವಾನ್ 1008 ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಇದೇ 6ರಿಂದ 8ರ ತನಕ ಧಾಮ ಸಂಪ್ರೋಕ್ಷಣಾ ಪೂರ್ವಕ ಜಿನಬಿಂಬಗಳ ಪುನಃ ಪ್ರತಿಷ್ಠಾ ಮಹೋತ್ಸವ ನಡೆಯಲಿದೆ.</p>.<p>ಕಾರ್ಕಳ ದಾನಶಾಲಾ ಜೈನಮಠದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ನೇತೃತ್ವ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ಈ ಮಹೋತ್ಸವ ನಡೆಯಲಿದೆ.</p>.<p>6ರಂದು ಬೆಳಿಗ್ಗೆ ಧಾರ್ಮಿಕ ಕಾರ್ಯಕ್ರಮಗಳು, ಸಂಜೆ 6ಕ್ಕೆ ನಡೆಯುವ ಧಾರ್ಮಿಕ ಸಭೆಯಲ್ಲಿ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮುಖಂಡ ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸುವರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ ಶೈಲಿಯಲ್ಲಿ ‘ಜಿನಗಂಧೋದಕ ಮಹಿಮೆ’ ಎಂಬ ಕಾವ್ಯ– ವಾಚನ- ಪ್ರವಚನ ವೈಭವ ನಡೆಯಲಿದೆ. ಕಾವ್ಯಶ್ರೀ ಅಜೇರು ಹಾಡುಗಾರಿಕೆಯಲ್ಲಿ ಮುನಿರಾಜ ರೆಂಜಾಳ ಮತ್ತು ತಂಡದವರು ನಡೆಸಿಕೊಡುವರು. </p>.<p>7ರಂದು ಬೆಳಿಗ್ಗೆ ಧಾರ್ಮಿಕ ಕಾರ್ಯಕ್ರಮ, ಮಧ್ಯಾಹ್ನ 3 ರಿಂದ ಪುರ ಮೆರವಣಿಗೆ, ಸಂಜೆ ರೆಂಜಾಳದ ಜೈನ ಬಾಂಧವರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ 6ಕ್ಕೆ ಧಾರ್ಮಿಕ ಸಭೆ ನಡೆಯಲಿದೆ. ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮೂಡುಬಿದಿರೆ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡುವರು. ಪ್ರತಿಮಾಧಾರಿ ಶ್ರಾವಕಿ ಜಯಮಾಲಾ ಎನ್. ಉಜಿರೆ ಅಧ್ಯಕ್ಷತೆ ವಹಿಸುವರು. ಶಾಸಕ ವಿ. ಸುನಿಲ್ ಕುಮಾರ್ ಉಪಸ್ಥಿತರಿರುವರು.</p>.<p>8ರಂದು ಬೆಳಿಗ್ಗೆ ಧಾರ್ಮಿಕ ವಿಧಿಗಳು, 11.20ರಿಂದ 11.28ರ ವೃಷಭ ಲಗ್ನದಲ್ಲಿ ಭಗವಾನ್ 1008 ನೇಮಿನಾಥ ಸ್ವಾಮಿಗೆ 108 ಕಲಶಗಳ ಮಹಾಭಿಷೇಕ, 12ರಿಂದ 12.25ರ ಅವಧಿಯಲ್ಲಿ ಭಗವಾನ್ 1008 ಚಂದ್ರನಾಥ ಸ್ವಾಮಿಯ ಪ್ರತಿಷ್ಠೆ, 216 ಕಲಶಗಳ ಮಹಾಭಿಷೇಕ, ಮಹಾಮಂಗಳಾರತಿ ನಡೆಯಲಿದೆ. ಸಂಜೆ 6 ಗಂಟೆಗೆ ನಡೆಯುವ ಧಾರ್ಮಿಕ ಸಭೆಯಲ್ಲಿ ನರಸಿಂಹರಾಜಪುರ ಅತಿಶಯ ಕ್ಷೇತ್ರ ಸಿಂಹನಗದ್ದೆಯ ಲಕ್ಷ್ಮೀಸೇನ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡುವರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವಿರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸುವರು.</p>.<p>ನಂತರ ಕಾರ್ಕಳ ಲಲಿತಕೀರ್ತಿ ಯಕ್ಷಗಾನ ಕಲಾಮಂಡಳಿ ಸದಸ್ಯರಿಂದ ‘ಕಮಠೋಪಸರ್ಗ ವಿಜಯಿ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಬಸದಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮಹಾವೀರ ಹೆಗ್ಡೆ ರೆಂಜಾಳ ಮತ್ತು ಆಡಳಿತ ಮೊಕ್ತೇಸರ ಪಾರ್ಶ್ವನಾಥ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>